ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳ್ಗಿಚ್ಚು: ಮಣ್ಣಿನಲ್ಲಿರುವ ಸೂಕ್ಷ್ಮಾಣುಜೀವಿಗಳು ನಾಶ

‘ಹಸಿರ ಹೊದಿಕೆಗೆ ವರ್ಷಗಳೇ ಬೇಕು’
Last Updated 3 ಮಾರ್ಚ್ 2019, 20:17 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚಿಗೆ ಆಹುತಿಯಾಗಿರುವ 15 ಸಾವಿರ ಎಕರೆ ಅರಣ್ಯ ಪ್ರದೇಶ ಮತ್ತೆ ಸಹಜ ಸ್ಥಿತಿಗೆ ಬರಲು ಏಳೆಂಟು ವರ್ಷಗಳೇ ಬೇಕು ಎಂಬ ಅಭಿಪ್ರಾಯವನ್ನು ವನ್ಯಜೀವಿ ತಜ್ಞರು ವ್ಯಕ್ತಪಡಿಸಿದ್ದಾರೆ.

ಬೆಂಕಿಯಿಂದಾಗಿ ಮಣ್ಣಿನ ಸತ್ವ ಅಥವಾ ಅದರ ಆರೋಗ್ಯಕ್ಕೆ ತೀವ್ರ ಘಾಸಿಯಾಗುತ್ತದೆ. ಮತ್ತೆ‌ಆರೋಗ್ಯಯುತವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತದೆಎಂಬುದು ಅವರ ವಾದ.

ಬಂಡೀಪುರದಲ್ಲಿ ಕಂಡು ಬಂದಿರುವ ಕಾಳ್ಗಿಚ್ಚು ಬಹುತೇಕ ಪ್ರದೇಶಗಳಲ್ಲಿ ನೆಲ ಬೆಂಕಿ (ಗ್ರೌಂಡ್‌ ಫೈರ್‌) ಆಗಿರುವುದರಿಂದ ವನ್ಯ ಪ್ರಾಣಿಗಳ ಜೀವಕ್ಕೆ ತೊಂದರೆಯಾಗಿಲ್ಲ. ಸುಟ್ಟಿರುವ ಹೆಚ್ಚಿನ ಕಡೆಗಳಲ್ಲಿ ಹಸಿ ಮರಗಳಿಗೂ ದೊಡ್ಡ ಮಟ್ಟಿನ ಹಾನಿಯಾಗಿಲ್ಲ. ಹಾಗಿದ್ದರೂ, ಅರಣ್ಯದ ಜೈವಿಕ ವ್ಯವಸ್ಥೆಗೆ ಧಕ್ಕೆ ಉಂಟಾಗಿದೆ ಎಂದು ಹೇಳುತ್ತಾರೆ ತಜ್ಞರು.

‘ಪ್ರಾಣಿಗಳ ಜೀವಹಾನಿಯಾಗಿಲ್ಲ ಎಂದು ಅರಣ್ಯ ಅಧಿಕಾರಿಗಳು ಹಾಗೂ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರುವ ಬಿಡುವ ಹಾಗಿಲ್ಲ. ಯಾಕೆಂದರೆ, ಮಣ್ಣಿನಲ್ಲಿರುವ ಸೂಕ್ಷ್ಮಾಣುಜೀವಿಗಳು ಬೆಂಕಿಗೆ ಸುಟ್ಟು ಹೋಗಿರುತ್ತವೆ. ಮಣ್ಣಿನ ಆರೋಗ್ಯ ಕಾಪಾಡುವಲ್ಲಿ ಇವು ಅತ್ಯಂತ ಮುಖ್ಯಪಾತ್ರ ವಹಿಸುತ್ತವೆ’ ಎಂ‌ದು ಹಿರಿಯ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ್‌ ಹೇಳುತ್ತಾರೆ.

‘ವೈಜ್ಞಾನಿಕ ವರದಿಗಳ ಪ್ರಕಾರ ಅರಣ್ಯಕ್ಕೆ ಒಂದು ಬಾರಿ ಬೆಂಕಿ ಬಿದ್ದರೆ, ಅದು ಕಾಡಿನ ಏಳು ವರ್ಷಗಳ ಬೆಳವಣಿಗೆಯನ್ನು ಸ್ಥಗಿತಗೊಳಿಸುತ್ತದೆ.ಮಣ್ಣಿನಲ್ಲಿ ಸತ್ವ ಇಲ್ಲದಿದ್ದರೆ ಅಲ್ಲಿ ಏನೂ ಬೆಳೆಯುವುದಿಲ್ಲ. ನೆಲದಲ್ಲಿ ಸೂಕ್ಷ್ಮಾಣುಜೀವಿಗಳು ಸಕ್ರಿಯವಾಗಿದ್ದರೆ, ಮಣ್ಣಿನ ಆರೋಗ್ಯ ಉತ್ತಮವಾಗಿರುತ್ತದೆ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

*ಕಾಳ್ಗಿಚ್ಚಿನ ಪರಿಣಾಮ ಕಣ್ಣಿಗೆ ಕಾಣುವುದಿಲ್ಲ. ಕಾಡು ತನ್ನ ಮೂಲ ಗುಣ ಕಳೆದುಕೊಳ್ಳುತ್ತದೆ. ಪರೋಕ್ಷವಾಗಿ ಅದು ಜೀವ ಸಂಕುಲದ ಮೇಲೆ ಪರಿಣಾಮ ಬೀರುತ್ತದೆ

-ಕೃಪಾಕರ್,ವನ್ಯಜೀವಿ ಛಾಯಾಗ್ರಾಹಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT