2017ರ ಫೆಬ್ರುವರಿ 18ರಂದು ಆರಂಭವಾದ ಕಾಳ್ಗಿಚ್ಚು ಒಂದು ವಾರ ಕಾಲ ಬಂಡೀಪುರ ವನ್ಯಸಂಪತ್ತು ನಾಶಗೊಳಿಸಿತ್ತು. ಕಲ್ಕೆರೆ, ಹೆಡಿಯಾಲ, ಮಲೆಯೂರು, ಓಂಕಾರ, ಕುಂದುಕೆರೆ, ಗುಂಡ್ರೆ, ಬೇಗೂರು ವಲಯಗಳಲ್ಲಿ ಬೆಂಕಿ ರುದ್ರ ನರ್ತನ ತೋರಿತ್ತು. 10 ಸಾವಿರ ಎಕರೆಗಳಷ್ಟು ಕಾಡು ನಾಶವಾಗಿತ್ತು. ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದ ಗಾರ್ಡ್ ಮೃತಪಟ್ಟಿದ್ದರು. 2018ರಲ್ಲಿ ಮುಂಗಾರು ಪೂರ್ವ ಮಳೆ ಫೆಬ್ರುವರಿ ಅಂತ್ಯ, ಮಾರ್ಚ್ ಆರಂಭದಲ್ಲೇ ಬಂದಿದ್ದರಿಂದ ಕಾಡಿಗೆ ಬೆಂಕಿ ಬಿದ್ದಿರಲಿಲ್ಲ. ‘ಈ ರೀತಿ ಯಾವತ್ತೂ ಕಾಡು ಬೆಂದು ಹೋಗಿರಲಿಲ್ಲ’ ಎಂದು ಸ್ಥಳೀಯರು ಹೇಳುತ್ತಿದ್ದಾರೆ.