ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟ ವಲಯದ ಕೆಬ್ಬೇಪುರ– ಚೌಡಹಳ್ಳಿ ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಕಂಡು ಬಂದ ಬೆಂಕಿ ಮಗುವಿನಹಳ್ಳಿ ಜಾರ್ಕಲ್ಲು ಕ್ವಾರಿ ಗುಡ್ಡ, ಗುಮ್ಮನಗುಡ್ಡ, ಬಾಳೆತಾರ್ಕೊರೆ ಗುಡ್ಡ, ಗೌರಿ ಕಲ್ಲು ಬೆಟ್ಟದವರೆಗೆ ವ್ಯಾಪಿಸಿದೆ. ಶನಿವಾರ ಮಧ್ಯಾಹ್ನ 12ರ ವೇಳೆಗೆ ಮೇಲುಕಾಮನಹಳ್ಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ (ಎನ್ಎಚ್ 66)– ಊಟಿ ರಸ್ತೆ ಉದ್ಯಾನದ ಗೇಟ್ ಬಳಿಗೆ ಬೆಂಕಿ ತಲುಪಿದ್ದು, ಭಾನುವಾರ ಕೇರಳ ವಯನಾಡು ಭಾಗಕ್ಕೆ ಮುಟ್ಟಿದೆ.