<p><strong>ಗುಂಡ್ಲುಪೇಟೆ:</strong> ಕೇರಳ ಭಾಗ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಸತತ ಮಳೆಯಾಗುತ್ತಿರುವ ಪರಿಣಾಮ ಕಾಡಿನಲ್ಲಿ ಇರುವ ಬಹುತೇಕ ಕೆರೆಕಟ್ಟೆಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದು, ಮುಂದಿನ ಬೇಸಿಗೆಯಲ್ಲಿ ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆಯಾಗದು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.</p>.<p>ಈ ಬಾರಿ ಮುಂಗಾರು ಪೂರ್ವ ಹಾಗೂ ಮುಂಗಾರು ಆರಂಭದಲ್ಲಿ ಮಳೆ ಕೊರತೆ ಉಂಟಾಗಿತ್ತು. ಹಾಗಾಗಿ, ಕೆರೆಗಳು ಭರ್ತಿಯಾಗದಿರುವ ಆತಂಕ ಎದುರಾಗಿತ್ತು.</p>.<p>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ, ರಾಜ್ಯದ ಗಡಿಭಾಗ ಕೆಕ್ಕನಗಳ್ಳ, ಬಂಡೀಪುರದಲ್ಲಿ ಹದಿನೈದು ದಿನಗಳಿಂದ ಸತತವಾಗಿ ತುಂತುರು ಮಳೆಯಾಗುತ್ತಿದೆ. ಅದಕ್ಕೂ ಮೊದಲು ಸತತ ಮೂರ್ನಾಲ್ಕು ದಿನಗಳ ಜೋರಾಗಿ ಮಳೆಯಾಗಿತ್ತು. ಹೀಗಾಗಿ ಕೆರೆ ಕಟ್ಟೆಗಳಿಗೆ ಭರಪೂರ ನೀರು ಹರಿದು ಬಂದಿದ್ದು, ಬಹುತೇಕ ಭರ್ತಿಯಾಗಿವೆ.</p>.<p>1,020 ಚದರ ಕಿ.ಮೀ ವ್ಯಾಪ್ತಿಯಲ್ಲಿ ಹರಡಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 320 ಕೆರೆಗಳಿವೆ. ಇವುಗಳಲ್ಲಿ ಸುಮಾರು 150ಕ್ಕೂ ಹೆಚ್ಚು ದೊಡ್ಡ ಕೆರೆಗಳಿದೆ. ಒಟ್ಟು ಕೆರೆಗಳ ಪೈಕಿ 180ಕ್ಕೂ ಹೆಚ್ಚಿನ ಕೆರೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಾಡಿನಲ್ಲಿರುವ ತಾವರೆಕಟ್ಟೆ, ಮಂಗಲ ಕೆರೆ, ಗೋಪಾಲಸ್ವಾಮಿ ಬೆಟ್ಟ ಬಳಿ ಇರುವ ಹಿರಿಕೆರೆ, ಸೊಳ್ಳಿಕಟ್ಟೆ, ಹುಲಿಕೆರೆ ಮುಂತಾದ ಕೆರೆಗಳು ತುಂಬಿ ಕೊಡಿ ಬಿದ್ದಿವೆ ಎಂದು ಬೀಟ್ ಸಿಬ್ಬಂದಿ ಮಾಹಿತಿ ನೀಡಿದರು.</p>.<p>‘ಬತ್ತಿದ ಕೆರೆಗಳಿಗೆ ಕೊಳವೆ ಬಾವಿಗಳಿಂದ ಸೋಲಾರ್ ಪಂಪ್ ಮೂಲಕ ನೀರು ತುಂಬಿಸಲಾಗುತ್ತಿದೆ. ಬಂಡೀಪುರದ ಎಲ್ಲಾ ವಲಯದಲ್ಲಿ 45 ಕೊಳವೆಬಾವಿ ಕೊರೆದು ಸೋಲಾರ್ ಪಂಪ್ ಅಳವಡಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>‘ಎಲ್ಲಾ ಕೆರೆಗಳಲ್ಲಿ ನೀರು ಇರುವುದರಿಂದ ಸಫಾರಿಯಲ್ಲಿ ಪ್ರಾಣಿಗಳ ದರ್ಶನವಾಗುತ್ತಿದೆ. ಕೆರೆಗಳ ಬಳಿ ಆನೆ, ಹುಲಿ, ಕಾಡೆಮ್ಮೆ, ಚಿರತೆ, ಜಿಂಕೆ ಹೆಚ್ಚಾಗಿ ಕಂಡು ಬರುತ್ತಿದೆ. ಕಾಡಿನ ಕೆರೆಗಳಲ್ಲಿ ನೀರು ಇರುವುದರಿಂದ ಆನೆಗಳು ಗ್ರಾಮದ ಕೆರೆಗಳಿಗೆ ಬರುವುದು ಕಡಿಮೆಯಾಗಿದೆ’ ಎಂದು ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಕೇರಳ ಭಾಗ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಸತತ ಮಳೆಯಾಗುತ್ತಿರುವ ಪರಿಣಾಮ ಕಾಡಿನಲ್ಲಿ ಇರುವ ಬಹುತೇಕ ಕೆರೆಕಟ್ಟೆಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದು, ಮುಂದಿನ ಬೇಸಿಗೆಯಲ್ಲಿ ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆಯಾಗದು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.</p>.<p>ಈ ಬಾರಿ ಮುಂಗಾರು ಪೂರ್ವ ಹಾಗೂ ಮುಂಗಾರು ಆರಂಭದಲ್ಲಿ ಮಳೆ ಕೊರತೆ ಉಂಟಾಗಿತ್ತು. ಹಾಗಾಗಿ, ಕೆರೆಗಳು ಭರ್ತಿಯಾಗದಿರುವ ಆತಂಕ ಎದುರಾಗಿತ್ತು.</p>.<p>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ, ರಾಜ್ಯದ ಗಡಿಭಾಗ ಕೆಕ್ಕನಗಳ್ಳ, ಬಂಡೀಪುರದಲ್ಲಿ ಹದಿನೈದು ದಿನಗಳಿಂದ ಸತತವಾಗಿ ತುಂತುರು ಮಳೆಯಾಗುತ್ತಿದೆ. ಅದಕ್ಕೂ ಮೊದಲು ಸತತ ಮೂರ್ನಾಲ್ಕು ದಿನಗಳ ಜೋರಾಗಿ ಮಳೆಯಾಗಿತ್ತು. ಹೀಗಾಗಿ ಕೆರೆ ಕಟ್ಟೆಗಳಿಗೆ ಭರಪೂರ ನೀರು ಹರಿದು ಬಂದಿದ್ದು, ಬಹುತೇಕ ಭರ್ತಿಯಾಗಿವೆ.</p>.<p>1,020 ಚದರ ಕಿ.ಮೀ ವ್ಯಾಪ್ತಿಯಲ್ಲಿ ಹರಡಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 320 ಕೆರೆಗಳಿವೆ. ಇವುಗಳಲ್ಲಿ ಸುಮಾರು 150ಕ್ಕೂ ಹೆಚ್ಚು ದೊಡ್ಡ ಕೆರೆಗಳಿದೆ. ಒಟ್ಟು ಕೆರೆಗಳ ಪೈಕಿ 180ಕ್ಕೂ ಹೆಚ್ಚಿನ ಕೆರೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಾಡಿನಲ್ಲಿರುವ ತಾವರೆಕಟ್ಟೆ, ಮಂಗಲ ಕೆರೆ, ಗೋಪಾಲಸ್ವಾಮಿ ಬೆಟ್ಟ ಬಳಿ ಇರುವ ಹಿರಿಕೆರೆ, ಸೊಳ್ಳಿಕಟ್ಟೆ, ಹುಲಿಕೆರೆ ಮುಂತಾದ ಕೆರೆಗಳು ತುಂಬಿ ಕೊಡಿ ಬಿದ್ದಿವೆ ಎಂದು ಬೀಟ್ ಸಿಬ್ಬಂದಿ ಮಾಹಿತಿ ನೀಡಿದರು.</p>.<p>‘ಬತ್ತಿದ ಕೆರೆಗಳಿಗೆ ಕೊಳವೆ ಬಾವಿಗಳಿಂದ ಸೋಲಾರ್ ಪಂಪ್ ಮೂಲಕ ನೀರು ತುಂಬಿಸಲಾಗುತ್ತಿದೆ. ಬಂಡೀಪುರದ ಎಲ್ಲಾ ವಲಯದಲ್ಲಿ 45 ಕೊಳವೆಬಾವಿ ಕೊರೆದು ಸೋಲಾರ್ ಪಂಪ್ ಅಳವಡಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>‘ಎಲ್ಲಾ ಕೆರೆಗಳಲ್ಲಿ ನೀರು ಇರುವುದರಿಂದ ಸಫಾರಿಯಲ್ಲಿ ಪ್ರಾಣಿಗಳ ದರ್ಶನವಾಗುತ್ತಿದೆ. ಕೆರೆಗಳ ಬಳಿ ಆನೆ, ಹುಲಿ, ಕಾಡೆಮ್ಮೆ, ಚಿರತೆ, ಜಿಂಕೆ ಹೆಚ್ಚಾಗಿ ಕಂಡು ಬರುತ್ತಿದೆ. ಕಾಡಿನ ಕೆರೆಗಳಲ್ಲಿ ನೀರು ಇರುವುದರಿಂದ ಆನೆಗಳು ಗ್ರಾಮದ ಕೆರೆಗಳಿಗೆ ಬರುವುದು ಕಡಿಮೆಯಾಗಿದೆ’ ಎಂದು ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>