ಬೆಂಗಳೂರು: ಎರಡು ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರಾದ ರಾಹುಲ್ ಗಾಂಧಿ ಹಾಗೂ ಅಮಿತ್ ಶಾ ಮಂಗಳವಾರ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಚುನಾವಣೆ ಘೋಷಣೆಯಾಗುವ ಪೂರ್ವದಲ್ಲಿ ಬಿಜೆಪಿಯ ಶಾ, ಕಾಂಗ್ರೆಸ್ನ ರಾಹುಲ್ ಅನೇಕ ಬಾರಿ ರಾಜ್ಯಕ್ಕೆ ಬಂದಿದ್ದರು. ಒಂದೇ ದಿನ ಈ ಇಬ್ಬರೂ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವುದು ಇದೇ ಮೊದಲು.
ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಹಾವೇರಿ ಜಿಲ್ಲೆಯ ಕಾಗಿನೆಲೆಗೆ ಶಾ ಬರಲಿದ್ದು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಿಗೆ ರಾಹುಲ್ ಭೇಟಿ ಕೊಡಲಿದ್ದಾರೆ.