<p><strong>ಬೆಂಗಳೂರು:</strong> ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ಪ್ರೊ.ವೇಣುಗೋಪಾಲ ಅವರ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ನೇಮಕಾತಿ ಪ್ರಶ್ನಿಸಿದ್ದ ಧಾರವಾಡದ ಡಾ.ಸಂಗಮೇಶ ಎ.ಪಾಟೀಲಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪುರಸ್ಕರಿಸಿದೆ. ಜೂನ್ 12, 2018ರಂದು ಇವರ ನೇಮಕವಾಗಿತ್ತು.</p>.<p>‘ಇವರ ನೇಮಕವು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ–2000 ಕಲಂ 14 (4)ಕ್ಕೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ವಾದಿಸಿದ್ದರು. ಶೋಧನಾ ಸಮಿತಿ ಶಿಫಾರಸಿನಂತೆ ಕುಲಪತಿ ಸ್ಥಾನಕ್ಕೆ ತನ್ನ ಹೆಸರು ಪರಿಗಣಿಸಲು ನಿರ್ದೇಶಿಸಲು ಕೋರಿದ್ದರು.</p>.<p><strong>ಆರೋಪಗಳೇನು?</strong><br />* ವೇಣುಗೋಪಾಲ ಅವರು ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ಗೆ (ಯುವಿಸಿಇ) ನೇಮಕಗೊಳ್ಳುವಾಗ ಸುಳ್ಳು ಜಾತಿ ಪ್ರಮಾಣಪತ್ರ ಮತ್ತು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದರು.<br />* ವಿದ್ಯಾರ್ಥಿನಿಯೊಬ್ಬರಿಗೆ ಅಕ್ರಮವಾಗಿ ಪರೀಕ್ಷೆ ಬರೆಯಲು ನೆರವಾಗಿದ್ದರು. ರೀಡರ್ ಹುದ್ದೆಗೆ ನೇಮಕವನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಗೊಳಿಸಿತ್ತು.<br />* ಯುವಿಸಿಇನಲ್ಲಿ ಪೂರ್ಣಾವಧಿ ನೌಕರರಾಗಿದ್ದಾಗ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದನಾಲ್ಕು ಕೋರ್ಸ್ಗಳನ್ನು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಏಕಕಾಲಕ್ಕೆ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ಪ್ರೊ.ವೇಣುಗೋಪಾಲ ಅವರ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ನೇಮಕಾತಿ ಪ್ರಶ್ನಿಸಿದ್ದ ಧಾರವಾಡದ ಡಾ.ಸಂಗಮೇಶ ಎ.ಪಾಟೀಲಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪುರಸ್ಕರಿಸಿದೆ. ಜೂನ್ 12, 2018ರಂದು ಇವರ ನೇಮಕವಾಗಿತ್ತು.</p>.<p>‘ಇವರ ನೇಮಕವು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ–2000 ಕಲಂ 14 (4)ಕ್ಕೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ವಾದಿಸಿದ್ದರು. ಶೋಧನಾ ಸಮಿತಿ ಶಿಫಾರಸಿನಂತೆ ಕುಲಪತಿ ಸ್ಥಾನಕ್ಕೆ ತನ್ನ ಹೆಸರು ಪರಿಗಣಿಸಲು ನಿರ್ದೇಶಿಸಲು ಕೋರಿದ್ದರು.</p>.<p><strong>ಆರೋಪಗಳೇನು?</strong><br />* ವೇಣುಗೋಪಾಲ ಅವರು ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ಗೆ (ಯುವಿಸಿಇ) ನೇಮಕಗೊಳ್ಳುವಾಗ ಸುಳ್ಳು ಜಾತಿ ಪ್ರಮಾಣಪತ್ರ ಮತ್ತು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದರು.<br />* ವಿದ್ಯಾರ್ಥಿನಿಯೊಬ್ಬರಿಗೆ ಅಕ್ರಮವಾಗಿ ಪರೀಕ್ಷೆ ಬರೆಯಲು ನೆರವಾಗಿದ್ದರು. ರೀಡರ್ ಹುದ್ದೆಗೆ ನೇಮಕವನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಗೊಳಿಸಿತ್ತು.<br />* ಯುವಿಸಿಇನಲ್ಲಿ ಪೂರ್ಣಾವಧಿ ನೌಕರರಾಗಿದ್ದಾಗ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದನಾಲ್ಕು ಕೋರ್ಸ್ಗಳನ್ನು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಏಕಕಾಲಕ್ಕೆ ಪೂರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>