ರೌಡಿಶೀಟರ್ ಲಕ್ಷ್ಮಣ್ ಕೊಲೆ ಪ್ರಕರಣದ ಆರೋಪಿಯಾಗಿರುವ ಕ್ಯಾಟ್ ರಾಜ ಸದ್ಯ ಜೈಲಿನಲ್ಲಿದ್ದಾನೆ. ಆತನನ್ನು ಜೈಲಿನಿಂದ ಬಿಡಿಸಲು ಹಣ ಅಗತ್ಯವಿದ್ದು, ಜಮೀನು ಮಾರಾಟ ಮಾಡಿ ಹಣ ನೀಡುವಂತೆ ತಮ್ಮ ಸಂದೀಪ್ ರೆಡ್ಡಿಯ ಅಲಿಯಾಸ್ ಕೋತಿರೆಡ್ಡಿ ಬಳಿ ಸುಮಲತಾ ಒತ್ತಾಯಿಸಿದ್ದಳು. ಆದರೆ, ಅದಕ್ಕೆ ಸಂದೀಪ್ ರೆಡ್ಡಿ ಒಪ್ಪಿರಲಿಲ್ಲ. ಅಲ್ಲದೆ, ಅಕ್ಕನಿಂದ ದೂರವಾಗಿ, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಬಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದ.