‘ಕೆಲವು ರಾಜಕಾರಣಿಗಳು ಮೋದಿ, ಅಮಿತ್ ಶಾ ಅವರನ್ನು, ಇನ್ನು ಕೆಲವರು ಸೋನಿಯಾ, ರಾಹುಲ್ ಅವರನ್ನು ಬೀದಿಬೀದಿಗಳಲ್ಲಿ ಬಾಯಿಗೆ ಬಂದಂತೆ ಅಸಂಸದೀಯ ಭಾಷೆಯಲ್ಲಿ ನಿಂದಿಸಿದರೂ ಮಾನನಷ್ಟ ಮೊಕದ್ದಮೆ ಹೂಡುವುದಿಲ್ಲ. ವರ್ಷದ ಹಿಂದೆ ದೆಹಲಿಯ ಜಂತರ್ ಮಂತರ್ನಲ್ಲಿ ಸಂವಿಧಾನ ಸುಟ್ಟು ಅಂಬೇಡ್ಕರ್ ಅವರಿಗೆ ಧಿಕ್ಕಾರ ಕೂಗಿದವರ ವಿರುದ್ಧ ಯಾವ ಕ್ರಮ ಜರುಗಿಸಲಾಯಿತೋ ಗೊತ್ತಿಲ್ಲ. ಗಾಂಧಿ ಚಿತ್ರಕ್ಕೆ ಗುಂಡು ಹಾರಿಸಿದವರು ಬಂಧನಕ್ಕೆ ಒಳಗಾಗದಿರುವುದು ವಿಪರ್ಯಾಸ’ ಎಂದರು.