ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದಿ ಕರ್ನಾಟಕ ಹಿಸ್ಟರಿ ಕಾಂಗ್ರೆಸ್’ 29ನೇ ಮಹಾಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಮೂಲಭೂತವಾದಿಗಳು, ಗರ್ಭಗುಡಿ ಸಂಸ್ಕೃತಿಯವರು ಚರಿತ್ರೆಯ ಚಾರಿತ್ರ್ಯ ಹಾಳು ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹರಣ ಕೂಡ ಆಗುತ್ತಿದೆ. ಚರಿತ್ರೆ ಗೊತ್ತಿಲ್ಲದ, ಚಾರಿತ್ರ್ಯ ಇಲ್ಲದವರು ಚರಿತ್ರೆ ಬಗ್ಗೆ ಮಾತನಾಡುತ್ತಿದ್ದಾರೆ. ಎಲ್ಲಾ ತಿಳಿದುಕೊಂಡವರು, ಚರಿತ್ರೆಕಾರರು ಅದರ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿದೆ. ಇಲ್ಲವಾದರೆ ಸುಳ್ಳೇ ಸತ್ಯವೆಂದು ಜನ ಭಾವಿಸುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.