ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅನಂತಕುಮಾರ್ ಬದುಕಿದ್ದರೆ ರಾಜ್ಯದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸೇತುವೆಯಾಗಿದ್ದರು. ಆದರೆ, ಈಗಿನ ಸಂಸದರು ತಗ್ಗುಗಳಾಗಿದ್ದಾರೆ. ರಾಜ್ಯದಲ್ಲಿ ಮೂವರು ಕೇಂದ್ರ ಸಚಿವರು ಇದ್ದೀರಿ. ಒಬ್ಬರಾದರೂ ಸೇತುವೆಯಂತೆ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.