<p><strong>ಬೆಂಗಳೂರು</strong>: ಬೇರೆ ರಾಜ್ಯಗಳಿಂದ ಬರುವವರು ‘ಸೇವಾ ಬಂಧು‘ ಆ್ಯಪ್ನಲ್ಲಿ ನೋಂದಾಯಿಸಿರಬೇಕು ಮತ್ತು ಎರಡು ರಾಜ್ಯಗಳ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳ ಜತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಅವರು ಈ ಸೂಚನೆ ನೀಡಿದರು.</p>.<p>‘ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಅಂತರ ರಾಜ್ಯಗಳಿಂದ ಪರವಾನಗಿ ಇಲ್ಲದೇ ಬರುವ ವಾಹನಗಳನ್ನು ನಿಷೇಧಿಸಬೇಕು. ನಮ್ಮ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಹೋಗಬೇಕಾಗಿರುವ ಜನರಿಗೆ ಸರ್ಕಾರದ ಸೂಚನೆಯಂತೆ ಪರವಾನಗಿ ನೀಡುವುದನ್ನು ನಿಯಂತ್ರಿಸಬೇಕು’ ಎಂದೂ ಬೊಮ್ಮಾಯಿ ಸೂಚಿಸಿದರು.</p>.<p>ಕಂಟೇನ್ಮೆಂಟ್ ಮತ್ತು ಬಫರ್ ವಲಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು. ಇತರೆ ಪ್ರದೇಶಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಮತ್ತು ಜನರ ಓಡಾಟವನ್ನು ನಿಷೇಧಿಸುವ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದರು.</p>.<p><strong>ನೆಗೆಟಿವ್ ಫಲಿತಾಂಶ:</strong> ಸುದ್ದಿವಾಹಿನಿಯೊಂದರ ಕ್ಯಾಮೆರಾಮನ್ ಒಬ್ಬರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದರಿಂದಾಗಿ, ಅವರ ಸಂಪರ್ಕಕ್ಕೆ ಬಂದಿದ್ದ ಬೊಮ್ಮಾಯಿ ಅವರು ಸ್ವಯಂ ಪ್ರೇರಣೆಯ ಗೃಹ ಕ್ವಾರಂಟೈನ್ಗೆ ಒಳಗಾಗಿದ್ದರು.</p>.<p>‘ಎರಡನೇ ಬಾರಿ ಪರೀಕ್ಷೆ ಮಾಡಿಸಿಕೊಂಡಾಗಲೂ ವರದಿ ನೆಗೆಟಿವ್ ಬಂದಿದೆ. 14 ದಿನ ಕ್ವಾರಂಟೈನ್ ಅವಧಿ ಮುಗಿದಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೇರೆ ರಾಜ್ಯಗಳಿಂದ ಬರುವವರು ‘ಸೇವಾ ಬಂಧು‘ ಆ್ಯಪ್ನಲ್ಲಿ ನೋಂದಾಯಿಸಿರಬೇಕು ಮತ್ತು ಎರಡು ರಾಜ್ಯಗಳ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳ ಜತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಅವರು ಈ ಸೂಚನೆ ನೀಡಿದರು.</p>.<p>‘ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಅಂತರ ರಾಜ್ಯಗಳಿಂದ ಪರವಾನಗಿ ಇಲ್ಲದೇ ಬರುವ ವಾಹನಗಳನ್ನು ನಿಷೇಧಿಸಬೇಕು. ನಮ್ಮ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಹೋಗಬೇಕಾಗಿರುವ ಜನರಿಗೆ ಸರ್ಕಾರದ ಸೂಚನೆಯಂತೆ ಪರವಾನಗಿ ನೀಡುವುದನ್ನು ನಿಯಂತ್ರಿಸಬೇಕು’ ಎಂದೂ ಬೊಮ್ಮಾಯಿ ಸೂಚಿಸಿದರು.</p>.<p>ಕಂಟೇನ್ಮೆಂಟ್ ಮತ್ತು ಬಫರ್ ವಲಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು. ಇತರೆ ಪ್ರದೇಶಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಮತ್ತು ಜನರ ಓಡಾಟವನ್ನು ನಿಷೇಧಿಸುವ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದರು.</p>.<p><strong>ನೆಗೆಟಿವ್ ಫಲಿತಾಂಶ:</strong> ಸುದ್ದಿವಾಹಿನಿಯೊಂದರ ಕ್ಯಾಮೆರಾಮನ್ ಒಬ್ಬರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದರಿಂದಾಗಿ, ಅವರ ಸಂಪರ್ಕಕ್ಕೆ ಬಂದಿದ್ದ ಬೊಮ್ಮಾಯಿ ಅವರು ಸ್ವಯಂ ಪ್ರೇರಣೆಯ ಗೃಹ ಕ್ವಾರಂಟೈನ್ಗೆ ಒಳಗಾಗಿದ್ದರು.</p>.<p>‘ಎರಡನೇ ಬಾರಿ ಪರೀಕ್ಷೆ ಮಾಡಿಸಿಕೊಂಡಾಗಲೂ ವರದಿ ನೆಗೆಟಿವ್ ಬಂದಿದೆ. 14 ದಿನ ಕ್ವಾರಂಟೈನ್ ಅವಧಿ ಮುಗಿದಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>