‘ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ನಮ್ಮ ಸರ್ಕಾರ ಕೈಬಿಟ್ಟಿಲ್ಲ. ಅದರ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಆ ವರದಿ ಬಂದ ನಂತರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿ ಆಗಿದ್ದರು. ಸಮ್ಮಿಶ್ರ ಸರ್ಕಾರವೂ ಅಧಿಕಾರದಲ್ಲಿತ್ತು. ಅವರು ಏಕೆ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಿಲ್ಲ’ ಎಂದೂ ಪ್ರಶ್ನಿಸಿದರು.