ಪರಿಸ್ಥಿತಿಯ ದುರ್ಲಾಭ ಪಡೆಯುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತದೆ. ಜಿಲ್ಲೆ ಮತ್ತು ರಾಜ್ಯದ ಗಡಿ ಬಂದ್ ಮಾಡುವುದರಿಂದ ಜನರಿಗೆ ತೊಂದರೆಯಾಗುತ್ತೆ ಎಂಬುದು ನಮಗೆ ಗೊತ್ತು. ಆದರೆ, ಇದು ಅನಿವಾರ್ಯವಾಗಿ ತೆಗೆದುಕೊಂಡ ನಿರ್ಧಾರ. ಈ ಸಂಕಷ್ಟ ಪರಿಸ್ಥಿತಿ ನಿರ್ವಹಿಸಲು ಜನರು ಸರ್ಕಾರಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.