ರಾಜ್ಯಕ್ಕೆ ನೆರೆ ಪರಿಹಾರ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಮುಖ್ಯಮಂತ್ರಿ ಜತೆ ಮೋದಿ ಮಾತನಾಡಿದ್ದಾರೆ. ಮೋದಿ ಅವರಿಗೆ ಕರ್ನಾಟಕದ ಬಗ್ಗೆ ಅಪಾರ ಪ್ರೀತಿ, ವಿಶ್ವಾಸವಿದೆ. ಬರ ಬಂದಾಗ ರಾಜ್ಯಕ್ಕೆ ಹೆಚ್ಚು ಪರಿಹಾರ ನೀಡಿದ್ದಾರೆ. ಈಗಲೂ ಕೊಡುತ್ತಾರೆ. ವಿರೋಧ ಪಕ್ಷದವರು ತಮ್ಮ ಸರ್ಕಾರವಿದ್ದಾಗ ಎಷ್ಟು ಬರ ಪರಿಹಾರ ರಾಜ್ಯಕ್ಕೆ ಬಂದಿತ್ತು. ಕಳೆದ 5 ವರ್ಷಗಳಲ್ಲಿ ಎಷ್ಟು ಬಂದಿದೆ ಎಂಬುದುನ್ನು ತಿಳಿದುಕೊಂಡು ಮಾತನಾಡಲಿ’ ಎಂದು ಹೇಳಿದರು.