ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಒಬ್ಬರ ವಿರುದ್ಧ ದೂರು ಬಂದರೆ ಏನು ಮಾಡಬೇಕು ಎಂಬುದ್ದಕ್ಕೆ ಸುಪ್ರೀಂಕೋರ್ಟಿನ ತೀರ್ಪು ಇದೆ. ಅದರ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ‘ರಿಪಬ್ಲಿಕ್ ಟಿ.ವಿ’ಯ ಅರ್ನಾಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ 1,500 ದೂರುಗಳು ದಾಖಲಾಗಿವೆ. ಈ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆ ನೀತಿ ಅನುಸರಿಸುತ್ತಿದೆ’ ಎಂದು ಚಾಟಿ ಬೀಸಿದರು.