ಅನುದಾನ ಬಿಡುಗಡೆ, ಉನ್ನತ ಅಧಿಕಾರಿಗಳ ನೇಮಕಾತಿ, ಕುಲಪತಿಗಳ ನೇಮಕಾತಿ ಸೇರಿದಂತೆ ಎಲ್ಲ ಪ್ರಮುಖ ಹುದ್ದೆಗಳೂ ದಕ್ಷಿಣ ಕರ್ನಾಟಕದವರ ಪಾಲಾಗುತ್ತಿವೆ. ಬೆಳಗಾವಿಯ ಕಿತ್ತೂರು ಚನ್ನಮ್ಮ ವಿಶ್ವವಿದ್ಯಾಲಯಕ್ಕೂ ದಕ್ಷಿಣದವರನ್ನೇ ನೇಮಕ ಮಾಡಿರುವುದು ಇನ್ನೊಂದು ತಾಜಾ ಉದಾಹರಣೆಯಾಗಿದೆ. ಅರ್ಹರಿದ್ದರೂಈ ಭಾಗದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ದೂರಿದ್ದಾರೆ.