ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂಬ ನಿಯಮ ಇದ್ದರೂ ಅದು ಪಾಲನೆ ಆಗುತ್ತಿಲ್ಲ. ಕನ್ನಡಿಗರು ತಮ್ಮ ಸಹಿಯನ್ನು ಕನ್ನಡದಲ್ಲೇ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಉತ್ತಮ ಕಟ್ಟಡ, ಶೌಚಾಲಯಗಳಿಲ್ಲ. ಖಾಸಗಿ ಸಂಸ್ಥೆಗಳು ಉತ್ತಮ ಶಾಲೆಗಳನ್ನು ಸ್ಥಾಪಿಸಲು ಸಾಧ್ಯವಾಗುವುದಾದರೆ, ಸರ್ಕಾರಕ್ಕೆ ಏಕೆ ಸಾಧ್ಯವಿಲ್ಲ. ಇದು ಸರ್ಕಾರದ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ದೂರಿದರು.