ಕೆ.ಆರ್.ಪುರ: ‘ಬೆಂಗಳೂರು ನಗರಾಭಿವೃದ್ಧಿ ಖಾತೆ ಸೇರಿದಂತೆ ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ನೂತನ ಶಾಸಕ ಬೈರತಿ ಬಸವರಾಜ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಎಲ್ಲ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
‘ನಗರಾಭಿವೃದ್ಧಿಯ ಕುರಿತು ಹೆಚ್ಚು ಅನುಭವವಿದೆ. ಇದಲ್ಲದೆ, ಬೇರೆ ಯಾವುದೇ ಖಾತೆ ನೀಡಿದರೂ ಸಮರ್ಥ ವಾಗಿ ನಿಭಾಯಿಸುತ್ತೇನೆ’ ಎಂದರು.