ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ‘ಕೋವಿಡ್ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರವು ಸ್ಮಾರ್ಟ್ ಸಿಟಿ ಅಭಿಯಾನದಡಿ ಹಲವು ಯೋಜನೆಗಳನ್ನು ರೂಪಿಸಿ, ಜಾರಿ ಮಾಡುತ್ತಿದೆ. ಈ ಬಗ್ಗೆ ಅಗತ್ಯ ಮಾಹಿತಿಗಳನ್ನೂ ಪಡೆದುಕೊಂಡಿದೆ. ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಅತ್ಯಾಧುನಿಕ ಉಪಕರಣಗಳ ಖರೀದಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಗುಣಮಟ್ಟದ ಸೇವೆ ದೊರೆಯಲಿದೆ’ ಎಂದು ತಿಳಿಸಿದರು.