ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿರುವಕಾವೇರಿಪುರ ವಾರ್ಡ್ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ‘ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಶುಕ್ರವಾರ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು’ ಎಂದು ಜೆಡಿಎಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ್ ಹೇಳಿದರು.