<p><strong>ಬೆಂಗಳೂರು:</strong> ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಹಿಂದಿನ ದೋಸ್ತಿ ಮುಂದುವರಿಸುವ ಸಂಬಂಧ ಆ ಪಕ್ಷದ ಮುಖಂಡರ ಜೊತೆ ಮಾತನಾಡಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಾರಥ್ಯ ವಹಿಸಲಿದ್ದಾರೆ.</p>.<p>ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಶುಕ್ರವಾರ ಬಿಬಿಎಂಪಿ ಕಾರ್ಪೋರೇಟರ್ಗಳುಹಾಗೂ ಜೆಡಿಎಸ್ ಶಾಸಕರ ಸಭೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.</p>.<p>ಒಂದು ವೇಳೆ ಕಾಂಗ್ರೆಸ್ ದೋಸ್ತಿಗೆ ಒಪ್ಪಿದರೆ, ದೋಸ್ತಿ ಮೂಲಕ ಚುನಾವಣೆ ಎದುರಿಸಲು ಸಿದ್ಧರಿರುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಮಾತುಕತೆ ನಡೆಸಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರೇ ಸಾರಥ್ಯವಹಿಸಬೇಕೆಂದು ಒಕ್ಕೊರಲಿನಿಂದ ತೀರ್ಮಾನಿಸಲಾಗಿದೆ.</p>.<p>ಜೆ.ಪಿ.ನಗರದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ದಾಸರಹಳ್ಳಿಯ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್ ಪ್ರಕಾಶ ಹಾಗೂ ಉಪಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್ ನ ಎಲ್ಲಾ ಬಿಬಿಎಂಪಿ ಸದಸ್ಯರ ಹಾಜರಿದ್ದರು.ಬಿಬಿಎಂಪಿ ಮೇಯರ್ ಚುನಾವಣೆಗೆ ಹಿಂದಿನ ದೋಸ್ತಿ ಮುಂದುವರಿಸಬೇಕೆ ಅಥವಾ ಬೇಡವೆ, ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವು ಏನಾಗಿರಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಎಚ್ಡಿಕೆ ಚರ್ಚಿಸಿದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಹಿಂದಿನ ದೋಸ್ತಿ ಮುಂದುವರಿಸುವ ಸಂಬಂಧ ಆ ಪಕ್ಷದ ಮುಖಂಡರ ಜೊತೆ ಮಾತನಾಡಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಾರಥ್ಯ ವಹಿಸಲಿದ್ದಾರೆ.</p>.<p>ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಶುಕ್ರವಾರ ಬಿಬಿಎಂಪಿ ಕಾರ್ಪೋರೇಟರ್ಗಳುಹಾಗೂ ಜೆಡಿಎಸ್ ಶಾಸಕರ ಸಭೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.</p>.<p>ಒಂದು ವೇಳೆ ಕಾಂಗ್ರೆಸ್ ದೋಸ್ತಿಗೆ ಒಪ್ಪಿದರೆ, ದೋಸ್ತಿ ಮೂಲಕ ಚುನಾವಣೆ ಎದುರಿಸಲು ಸಿದ್ಧರಿರುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಮಾತುಕತೆ ನಡೆಸಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರೇ ಸಾರಥ್ಯವಹಿಸಬೇಕೆಂದು ಒಕ್ಕೊರಲಿನಿಂದ ತೀರ್ಮಾನಿಸಲಾಗಿದೆ.</p>.<p>ಜೆ.ಪಿ.ನಗರದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ದಾಸರಹಳ್ಳಿಯ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್ ಪ್ರಕಾಶ ಹಾಗೂ ಉಪಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್ ನ ಎಲ್ಲಾ ಬಿಬಿಎಂಪಿ ಸದಸ್ಯರ ಹಾಜರಿದ್ದರು.ಬಿಬಿಎಂಪಿ ಮೇಯರ್ ಚುನಾವಣೆಗೆ ಹಿಂದಿನ ದೋಸ್ತಿ ಮುಂದುವರಿಸಬೇಕೆ ಅಥವಾ ಬೇಡವೆ, ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವು ಏನಾಗಿರಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಎಚ್ಡಿಕೆ ಚರ್ಚಿಸಿದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>