ಜೆ.ಪಿ.ನಗರದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ದಾಸರಹಳ್ಳಿಯ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್ ಪ್ರಕಾಶ ಹಾಗೂ ಉಪಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್ ನ ಎಲ್ಲಾ ಬಿಬಿಎಂಪಿ ಸದಸ್ಯರ ಹಾಜರಿದ್ದರು.ಬಿಬಿಎಂಪಿ ಮೇಯರ್ ಚುನಾವಣೆಗೆ ಹಿಂದಿನ ದೋಸ್ತಿ ಮುಂದುವರಿಸಬೇಕೆ ಅಥವಾ ಬೇಡವೆ, ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವು ಏನಾಗಿರಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಎಚ್ಡಿಕೆ ಚರ್ಚಿಸಿದರು ಎನ್ನಲಾಗಿದೆ.