ಕಾರ್ಪೊರೇಟರ್ಗಳು, ಶಾಸಕರು, ಸಂಸದರ ಹಲವು ಸುತ್ತುಗಳ ಸಭೆಯ ನಂತರವೇ ನಾವು ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದೇವೆ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಕಾಂಗ್ರೆಸ್ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಹಾಕಿದ್ದೂ ಅಲ್ಲದೇ, ನಮ್ಮಲ್ಲಿ ಚೀಟಿ ಸಂಸ್ಕೃತಿ ಇದೆ ಎಂದು ಹೇಳಿದೆ. ಆದರೆ, ನಮ್ಮಲ್ಲಿರುವ ಆಂತರಿಕ ಪ್ರಜಾಪ್ರಭುತ್ವ ಅವರ ಪಕ್ಷದಲ್ಲಿಲ್ಲ ಎಂದು ಅಶೋಕ್ ಅವರು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.