ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವಣ್ಣ ಶಿಫಾರಸು: ಪಿಡಬ್ಲ್ಯೂಡಿ ಎಂಜಿನಿಯರ್‌ ಬಿಡಿಎಗೆ ವರ್ಗ

Last Updated 4 ಮೇ 2019, 19:43 IST
ಅಕ್ಷರ ಗಾತ್ರ

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್‌ ಬಿ.ಜಯರಾಮಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಿರಿಯ ಎಂಜಿನಿಯರ್‌ ಹುದ್ದೆಗೆ ಶನಿವಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಶಿಫಾರಸು ಪತ್ರದ ಮೇರೆಗೆ ನಗರಾಭಿವೃದ್ಧಿ ಇಲಾಖೆ ಈ ವರ್ಗಾವಣೆ ಮಾಡಿದೆ.

ಜಯರಾಮಯ್ಯ ಅವರು ಈ ಹಿಂದೆ ಪ್ರಾಧಿಕಾರದಲ್ಲಿದ್ದರು. ಅವರ ಸೇವೆಯನ್ನು 2018ರ ನವೆಂಬರ್‌ 14ರಂದು ಮಾತೃ ಇಲಾಖೆಗೆ ಹಿಂತಿರುಗಿಸಲಾಗಿತ್ತು.

‘ಜಯರಾಮಯ್ಯ ಭ್ರಷ್ಟ ಅಧಿಕಾರಿ. ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ಪ್ರಾಧಿಕಾರಕ್ಕೆ ಮತ್ತೆ ನೇಮಕ ಮಾಡಿರುವುದು ಸರಿಯಲ್ಲ’ ಎಂದು ದಲಿತ ಮಹಾಸಭಾ ದೂರಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಒಂದು ವೇಳೆ ನೇಮಕ ಹಿಂದಕ್ಕೆ ಪಡೆಯದಿದ್ದರೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುತ್ತದೆ ಎಂದು ಎಚ್ಚರಿಸಿದೆ.

ಪ್ರಾಧಿಕಾರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಮುಖ್ಯ ಎಂಜಿನಿಯರ್‌ ಹುದ್ದೆಗೆ ಭಾರತೀಯ ರೈಲ್ವೆ ಇಲಾಖೆಯ ಪ್ರಧಾನ ಮುಖ್ಯ ಎಂಜಿನಿಯರ್‌ ಎಂ.ವಿ.ಪ್ರಸಾದ್‌ ಅವರನ್ನು ನೇಮಕ ಮಾಡಲಾಗಿತ್ತು. ಸಚಿವ ರೇವಣ್ಣ ಶಿಫಾರಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂಬ ಆರೋಪ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT