‘ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ, ಕ್ವಾರಂಟೈನ್ ಕೇಂದ್ರದಲ್ಲಿ 7 ದಿನಗಳಿಂದ ಇದ್ದ ಕೆಲವರನ್ನು ಬಿಡುಗಡೆ ಮಾಡಲಾಗಿತ್ತು. ಅವರು ತಮ್ಮ ತಮ್ಮ ಮನೆಗಳಿಗೆ ಹೋಗಿದ್ದರು. ಅವರಲ್ಲಿ ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿದುಬಂದಿದೆ. ‘ತಾಲ್ಲೂಕಿನ ಅಗಸಗಿ ಗ್ರಾಮದ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ವರದಿ ಬರುವುದಕ್ಕೂ ಮುನ್ನವೇ ಮನೆಗೆ ಕಳುಹಿಸಲಾಗಿದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.