ರಾಜಾಪುರ ಬ್ಯಾರೇಜ್ನಿಂದ 44,125 ಕ್ಯುಸೆಕ್ ಮತ್ತು ದೂಧ್ಗಂಗಾ ನದಿಯಿಂದ 10,912 ಕ್ಯುಸೆಕ್ ಸೇರಿ ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣಾ ನದಿಗೆ 55,037 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನಲ್ಲಿ ಮುಳುಗಡೆಯಾಗಿದ್ದ ಏಳು ಬ್ಯಾರೇಜ್ಗಳೂ ಸಂಚಾರಕ್ಕೆ ಮುಕ್ತಗೊಂಡಿವೆ. ಈ ಮುಂಗಾರು ಹಂಗಾಮಿನಲ್ಲಿ ಇವು 2ನೇ ಬಾರಿಗೆ ಮುಳುಗಡೆ ಆಗಿದ್ದವು.