ಆಸ್ತಿ ವಿವಾದ?: ತಂದೆ ಪರಶುರಾಮ ಅವರು 1967ರಲ್ಲಿ ಬೆಳಗಾವಿ ತಾಲ್ಲೂಕಿನ ಉಚಗಾಂವ ವಿಧಾನಸಭಾ ಕ್ಷೇತ್ರದಿಂದ (ಕ್ಷೇತ್ರ ಪುನರ್ ವಿಂಗಡಣೆ ನಂತರ ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರವಾಗಿ ವಿಭಜನೆಯಾಗಿದೆ) ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ವಿಶ್ವ ಭಾರತ ಸೇವಾ ಸಮಿತಿ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಈ ಸಂಸ್ಥೆಯಡಿ ಎರಡು ಪ್ರಾಥಮಿಕ ಹಾಗೂ 28 ಪ್ರೌಢಶಾಲೆಗಳನ್ನು ಆರಂಭಿಸಿದ್ದರು. ಪರಶುರಾಮ ಅವರಿಗೆ ವಿಜಯ, ಪ್ರಕಾಶ ಹಾಗೂ ಅರುಣ ಮೂವರು ಪುತ್ರ ಇದ್ದಾರೆ. ಶಿಕ್ಷಣ ಸಂಸ್ಥೆಯನ್ನು ಹಿರಿಯ ಅಣ್ಣ ವಿಜಯ ನೋಡಿಕೊಳ್ಳುತ್ತಿದ್ದರು. ಅದೇ ಸಂಸ್ಥೆಯಲ್ಲಿ ಅರುಣ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.