ಆಗ ಮಧ್ಯಪ್ರವೇಶಿಸಿದ ರಮೇಶ್ ಕುಮಾರ್, ’ಸಾಮಾನ್ಯ ಜನರಿಗೆ ಹಾಗೂ ಮುಖ್ಯಮಂತ್ರಿಗೆ ಒಂದೇ ರೀತಿಯ ಚಿಕಿತ್ಸೆ ಸಿಗಬೇಕು ಎಂಬ ಕಾರಣಕ್ಕೆ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತರಲಾಯಿತು. ಶಾಸಕರು ಚಿಕಿತ್ಸೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಆದರೆ, ಈ ಯೋಜನೆಗೆ ತಿದ್ದುಪಡಿ ತರಲು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ವಿಳಂಬ ಮಾಡುತ್ತಿದೆ‘ ಎಂದು ಕಿಡಿಕಾರಿದರು.