‘ಸ್ಮಶಾನದಲ್ಲಿ ವಿದ್ಯುತ್ ದೀಪ ಇಲ್ಲದ ಕಾರಣ ಮೊಬೈಲ್ ಬೆಳಕಿನಲ್ಲೇ ಅಂತ್ಯಸಂಸ್ಕಾರ ನಡೆಸುವ ಸ್ಥಿತಿ ಇದೆ. ಬಡಾವಣೆಯ ಅಲ್ಲಲ್ಲಿ ವಿದ್ಯುತ್ ದೀಪಗಳು ಇಲ್ಲದಿರುವುದರಿಂದ, ಸರಗಳವು ಪ್ರಕರಣಗಳು ಹೆಚ್ಚುತ್ತಿವೆ. ಮನವಿಗಳಿಗೆ ಅಧಿಕಾರಿಗಳಿಂದ ಸ್ಪಂದನೆ ದೊರೆಯುತ್ತಿಲ್ಲ. ನನ್ನನ್ನು ಆಯ್ಕೆ ಮಾಡಿದ ಜನರಿಗೆ ನಾನು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಕಂಬಗಳಿಗೆ ಬಲ್ಬ್ಗಳನ್ನು ಅಳವಡಿಸುವವರೆಗೂ ಇಳಿಯುವುದಿಲ್ಲ’ ಎಂದು ಹೇಳಿದರು.