ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ 10 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಯಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು. ಹುಕ್ಕೇರಿಯ 6, ನಿಪ್ಪಾಣಿಯ ಮೂವರು ಹಾಗೂ ಒಬ್ಬರು ಬಾಗಲಕೋಟೆಯವರು. ಇದರೊಂದಿಗೆ, ಈವರೆಗೆ 281 ಮಂದಿ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಇಳಿದಿದೆ.