2016ರಿಂದಬೆಳಗಾವಿ ಜಿಲ್ಲೆಯಲ್ಲಿ ಜಾರಿಗೆ ತರಲಾಗಿರುವ ಉಪಗಸ್ತು ವ್ಯವಸ್ಥೆಯಿಂದಾಗಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಜಿಲ್ಲಾ ಎಸ್ಪಿ ನೇತೃತ್ವದ ಈ ವ್ಯವಸ್ಥೆಯು ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿದೆ. ಸುಮಾರು 50 ಸಾವಿರ ಸಾರ್ವಜನಿಕರು, ಈ ಉಪಗಸ್ತು ಸಮಿತಿಯ ಸದಸ್ಯರಾಗಿದ್ದಾರೆ. ‘ಅಪರಾಧ ಮುಕ್ತ ಸಮಾಜ’ ನಿರ್ಮಿಸುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ.