ಈ ರೈಲು ಶನಿವಾರದಿಂದ ನಿತ್ಯ ರಾತ್ರಿ 9 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ 7.25ಕ್ಕೆ ಬೆಂಗಳೂರು ತಲುಪಲಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ. ಈ ರೈಲು ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.