ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಐವರು ಶಾಸಕರು ಶೀಘ್ರ ಕಾಂಗ್ರೆಸ್‌ಗೆ: ಬೇಳೂರು ಗೋಪಾಲಕೃಷ್ಣ

Last Updated 8 ಡಿಸೆಂಬರ್ 2018, 16:50 IST
ಅಕ್ಷರ ಗಾತ್ರ

ಶಿವಮೊಗ್ಗ:ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್ ಸೇರುವುದು ಖಚಿತ. ಈ ಕುರಿತು ಪಕ್ಷದ ಮುಖಂಡರ ಬಳಿ ಮಾತುಕತೆ ನಡೆಸಲಾಗಿದೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾಹಿತಿ ನೀಡಿದರು.

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳಿಸುವ ತಾಕತ್ತು ಬಿಜೆಪಿಗೆ ಇಲ್ಲ. ಆಪರೇಷನ್ ಕಮಲದ ತಾಕತ್ತುಬಿಜೆಪಿ ಮುಖಂಡರು ಕಳೆದುಕೊಂಡಿದ್ದಾರೆ. ಈಗ ಏನಿದ್ದರೂ ಆಪರೇಷನ್ ಹಸ್ತ. ಬಿಜೆಪಿಗೆ ತಾಕತ್ತಿದ್ದರೆ ತನ್ನ ಶಾಸಕರನ್ನುಹಿಡಿದಿಟ್ಟುಕೊಳ್ಳಲಿ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.

ಬಿಜೆಪಿ ತೊರೆಯುವಐವರಲ್ಲಿಹರತಾಳ ಹಾಲಪ್ಪ ಇದ್ದಾರೆಯೇಎಂದು ಕಾಲೆಳೆದ ಪತ್ರಕರ್ತರಿಗೆ ತೀಷ್ಣವಾಗಿ ಪ್ರತಿಕ್ರಿಯೆ ನೀಡಿದ ಬೇಳೂರು, ‘ಅವರು ಪಕ್ಷಕ್ಕೆ ಬರುತ್ತೇನೆಅಂದರೂ ಸೇರಿಸಿಕೊಳ್ಳಲು ಕಾಂಗ್ರೆಸ್‌ನಲ್ಲಿ ಯಾರೂಸಿದ್ಧರಿಲ್ಲ’ಎಂದರು.

ಬಿ.ಎಸ್. ಯಡಿಯೂರಪ್ಪ ಅವರನ್ನು ಇನ್ನು ಮುಂದೆ ಜೈಲಿಗೆ ಹೋಗಿ ಬಂದವರು ಎಂದು ಹೇಳಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬೆದರಿಕೆ ಹಾಕಿದ್ದಾರಲ್ಲ ಎಂಬ ಪ್ರಶ್ನೆಗೆ‘ನಾವು ಅವರ ಹೆಸರು ಹೇಳುವುದೇ ಇಲ್ಲ.ಮಾಜಿ ಮುಖ್ಯಮಂತ್ರಿ, ನಮ್ಮ ಜಿಲ್ಲೆಯ ಮುಖ್ಯಮಂತ್ರಿ ಹಿಂದೆಜೈಲಿಗೆ ಹೋಗಿ ಬಂದಿದ್ದರು ಎಂದಷ್ಟೇ ಹೇಳುತ್ತೇವೆ’ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT