ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ ಇಬ್ಬರ ದುರ್ಮರಣ

Last Updated 25 ಮೇ 2018, 19:41 IST
ಅಕ್ಷರ ಗಾತ್ರ

ಕುದೂರು (ಮಾಗಡಿ): ಕೂಡ್ಲೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯಲ್ಲಿ ಮಧ್ಯಾಹ್ನಕಾರೊಂದು ವಿಭಜಕ ಹತ್ತಿ ಉರುಳಿಬಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರು ಬನಶಂಕರಿ ನಿವಾಸಿಗಳಾದ ರತ್ನಮ್ಮ (65) ಮತ್ತು ಕಾರು ಚಾಲಕ ಜಹೀರ್‌ (27) ಎಂದು ಗುರುತಿಸಲಾಗಿದೆ. ರತ್ನಮ್ಮ ಅವರ
ಪತಿ, ಗಾಯಾಳು ರಂಗಸ್ವಾಮಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿ ಕಾರಿನಲ್ಲಿ ಕುದೂರು ಬಳಿ ದೇವರ ದರ್ಶನಕ್ಕೆ ಬಂದು ಪೂಜೆ ಸಲ್ಲಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT