<p><strong>ಬೆಂಗಳೂರು</strong>: ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಬಂದಿಗಳು ಹಾಗೂ ಸಿಬ್ಬಂದಿಯಲ್ಲೂ ಆತಂಕ ಕಾಡುತ್ತಿದೆ. ಹೀಗಾಗಿ, ಹೊಸದಾಗಿ ಯಾರೇ ಬಂದಿಗಳು ಕಾರಾಗೃಹಕ್ಕೆ ಬಂದರೂ ಅವರನ್ನು 21 ದಿನ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿದೆ.</p>.<p>ಗಂಭೀರ ಅಪರಾಧ ಪ್ರಕರಣಗಳ ವಿಚಾರಣಾಧೀನ ಬಂದಿಗಳು ಹಾಗೂ ಸಜಾ ಬಂದಿಗಳಿಗಾಗಿಯೇ ಕಾರಾಗೃಹದ ಆವರಣದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿತ್ತು. ಆದರೆ, ಅದು ಬಳಕೆಗೆ ಮುಕ್ತವಾಗಿರಲಿಲ್ಲ. ಈಗ ಅದೇ ಕಟ್ಟಡವನ್ನೇ ಕ್ವಾರಂಟೈನ್ಗೆ ಬಳಸಿಕೊಳ್ಳಲಾಗುತ್ತಿದ್ದು, ಕಟ್ಟಡದ ಸುತ್ತಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<p>3,500 ಬಂದಿಗಳ ಸಾಮರ್ಥ್ಯದ ಜೈಲಿನಲ್ಲಿ 5 ಸಾವಿರಕ್ಕೂ ಹೆಚ್ಚು ಬಂದಿಗಳು ಇದ್ದಾರೆ. ಎಲ್ಲರಿಗೂ ಮೂಲಸೌಕರ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಹೀಗಾಗಿ, 500 ಬಂದಿಗಳ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಿಸಲಾಗಿದೆ. ಇದರ ಉದ್ಘಾಟನೆ ಬಾಕಿ ಇತ್ತು. ಕೊರೊನಾ ಭೀತಿ ಶುರುವಾಗಿದ್ದರಿಂದ ಇದೇ ಕಟ್ಟಡವನ್ನೇ ಕ್ವಾರಂಟೈನ್ ಕೇಂದ್ರವಾಗಿ ಪರಿವರ್ತಿಸಲಾಗಿದೆ.</p>.<p>‘ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಕಾರಾಗೃಹ ಹಾಗೂ ಸುಧಾರಣಾ ಸೇವೆ ಡಿಜಿಪಿ ಅಲೋಕ್ ಮೋಹನ್ ಅವರು ಮಾರ್ಚ್ನಲ್ಲೇ ಸುತ್ತೋಲೆ ಹೊರಡಿಸಿದ್ದರು. ಅದರ ಪ್ರಕಾರವೇ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಾರಾಗೃಹದ ಅಧೀಕ್ಷಕ ವಿ. ಶೇಷಮೂರ್ತಿ ಹೇಳಿದರು.</p>.<p>‘ಹೊಸ ಕಟ್ಟಡದಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಹೊಸದಾಗಿ ಜೈಲಿಗೆ ಬರುವ ವಿಚಾರಣಾಧೀನ ಹಾಗೂ ಸಜಾ ಬಂದಿಗಳನ್ನು ಇದೇ ಕಟ್ಟಡದಲ್ಲಿ 21 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. ಪೆರೋಲ್ ಮೇಲೆ ಹೊರಗೆ ಹೋಗಿ ವಾಪಸು ಬರುವ ಬಂದಿಗಳಿಗೂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ’ ಎಂದರು.</p>.<p>‘250ಕ್ಕೂ ಹೆಚ್ಚು ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅವರನ್ನು ಕೊರೊನಾ ವೈರಾಣು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸಾಮಾನ್ಯ ಕೈದಿಗಳ ರೀತಿಯಲ್ಲೇ ನಿತ್ಯವೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ವರದಿ ನೆಗಟಿವ್ ಬಂದರಷ್ಟೇ ಬಂದಿಗಳನ್ನು ಸಾಮಾನ್ಯ ಬ್ಯಾರಕ್ಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದೂ ಅವರು ತಿಳಿಸಿದರು.</p>.<p class="Subhead"><strong>ಸಿಬ್ಬಂದಿಗೂ ಪರೀಕ್ಷೆ ಕಡ್ಡಾಯ; </strong>‘ರಜೆ ಮೇಲೆ ಊರಿಗೆ ಹೋಗಿ ಬರುವ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನೆಗಟಿವ್ ವರದಿ ಬಂದರಷ್ಟೇ ಕೆಲಸಕ್ಕೆ ಸೇರಿಸಿಕೊಳ್ಳಲಾಗುತ್ತಿದೆ’ ಎಂದೂ ಶೇಷಮೂರ್ತಿ ಹೇಳಿದರು.</p>.<p>‘ಬಂದಿಗಳಲ್ಲಿ ಜ್ವರ, ಕೆಮ್ಮು ಮತ್ತು ನೆಗಡಿ ಲಕ್ಷಣಗಳು ಇದ್ದರೂ ಕೊರೊನಾ ವೈರಾಣು ಪರೀಕ್ಷೆ ಮಾಡಿಸಲಾಗುತ್ತಿದೆ. ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ’ ಎಂದರು.</p>.<p><strong>500ಕ್ಕೂ ಹೆಚ್ಚು ಬಂದಿಗಳಿಗೆ ಪೆರೋಲ್</strong><br />ಕೇರಳದಲ್ಲಿ ಮೊದಲ ಕೊರೊನಾ ಪ್ರಕರಣ ಕಾಣಿಸಿಕೊಂಡಾಗಿನಿಂದಲೇ ಕಾರಾಗೃಹದಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. 500ಕ್ಕೂ ಹೆಚ್ಚು ಬಂದಿಗಳನ್ನು ಮೂರು ತಿಂಗಳ ಸಾಮಾನ್ಯ ಪೆರೋಲ್ ನೀಡಿ ಮನೆಗೆ ಕಳುಹಿಸಲಾಗಿದೆ.</p>.<p><strong>ಪೊಲೀಸರಿಂದಲೇ ಪರೀಕ್ಷೆ; ಮೆಚ್ಚುಗೆ</strong><br />ಅಪರಾಧ ಪ್ರಕರಣಗಳಲ್ಲಿ ಬಂಧಿಸುವ ಆರೋಪಿಗಳನ್ನು ಪೊಲೀಸರೇ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವುದಕ್ಕೆ ಕಾರಾಗೃಹದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಬೆಂಗಳೂರು ಪೊಲೀಸರೇ ಆರೋಪಿಗಳ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಬಂದವರನ್ನಷ್ಟೇ ಜೈಲಿಗೆ ಕಳುಹಿಸುತ್ತಿರುವುದು ಒಳ್ಳೆಯ ನಡೆ. ಮುಂಜಾಗ್ರತಾ ಕ್ರಮವಾಗಿ ಇಂಥ ಆರೋಪಿಗಳನ್ನೂ 21 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ’ ಎಂದು ಶೇಷಮೂರ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಬಂದಿಗಳು ಹಾಗೂ ಸಿಬ್ಬಂದಿಯಲ್ಲೂ ಆತಂಕ ಕಾಡುತ್ತಿದೆ. ಹೀಗಾಗಿ, ಹೊಸದಾಗಿ ಯಾರೇ ಬಂದಿಗಳು ಕಾರಾಗೃಹಕ್ಕೆ ಬಂದರೂ ಅವರನ್ನು 21 ದಿನ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿದೆ.</p>.<p>ಗಂಭೀರ ಅಪರಾಧ ಪ್ರಕರಣಗಳ ವಿಚಾರಣಾಧೀನ ಬಂದಿಗಳು ಹಾಗೂ ಸಜಾ ಬಂದಿಗಳಿಗಾಗಿಯೇ ಕಾರಾಗೃಹದ ಆವರಣದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿತ್ತು. ಆದರೆ, ಅದು ಬಳಕೆಗೆ ಮುಕ್ತವಾಗಿರಲಿಲ್ಲ. ಈಗ ಅದೇ ಕಟ್ಟಡವನ್ನೇ ಕ್ವಾರಂಟೈನ್ಗೆ ಬಳಸಿಕೊಳ್ಳಲಾಗುತ್ತಿದ್ದು, ಕಟ್ಟಡದ ಸುತ್ತಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.</p>.<p>3,500 ಬಂದಿಗಳ ಸಾಮರ್ಥ್ಯದ ಜೈಲಿನಲ್ಲಿ 5 ಸಾವಿರಕ್ಕೂ ಹೆಚ್ಚು ಬಂದಿಗಳು ಇದ್ದಾರೆ. ಎಲ್ಲರಿಗೂ ಮೂಲಸೌಕರ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಹೀಗಾಗಿ, 500 ಬಂದಿಗಳ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಿಸಲಾಗಿದೆ. ಇದರ ಉದ್ಘಾಟನೆ ಬಾಕಿ ಇತ್ತು. ಕೊರೊನಾ ಭೀತಿ ಶುರುವಾಗಿದ್ದರಿಂದ ಇದೇ ಕಟ್ಟಡವನ್ನೇ ಕ್ವಾರಂಟೈನ್ ಕೇಂದ್ರವಾಗಿ ಪರಿವರ್ತಿಸಲಾಗಿದೆ.</p>.<p>‘ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಕಾರಾಗೃಹ ಹಾಗೂ ಸುಧಾರಣಾ ಸೇವೆ ಡಿಜಿಪಿ ಅಲೋಕ್ ಮೋಹನ್ ಅವರು ಮಾರ್ಚ್ನಲ್ಲೇ ಸುತ್ತೋಲೆ ಹೊರಡಿಸಿದ್ದರು. ಅದರ ಪ್ರಕಾರವೇ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಾರಾಗೃಹದ ಅಧೀಕ್ಷಕ ವಿ. ಶೇಷಮೂರ್ತಿ ಹೇಳಿದರು.</p>.<p>‘ಹೊಸ ಕಟ್ಟಡದಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಹೊಸದಾಗಿ ಜೈಲಿಗೆ ಬರುವ ವಿಚಾರಣಾಧೀನ ಹಾಗೂ ಸಜಾ ಬಂದಿಗಳನ್ನು ಇದೇ ಕಟ್ಟಡದಲ್ಲಿ 21 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. ಪೆರೋಲ್ ಮೇಲೆ ಹೊರಗೆ ಹೋಗಿ ವಾಪಸು ಬರುವ ಬಂದಿಗಳಿಗೂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ’ ಎಂದರು.</p>.<p>‘250ಕ್ಕೂ ಹೆಚ್ಚು ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅವರನ್ನು ಕೊರೊನಾ ವೈರಾಣು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸಾಮಾನ್ಯ ಕೈದಿಗಳ ರೀತಿಯಲ್ಲೇ ನಿತ್ಯವೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ವರದಿ ನೆಗಟಿವ್ ಬಂದರಷ್ಟೇ ಬಂದಿಗಳನ್ನು ಸಾಮಾನ್ಯ ಬ್ಯಾರಕ್ಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದೂ ಅವರು ತಿಳಿಸಿದರು.</p>.<p class="Subhead"><strong>ಸಿಬ್ಬಂದಿಗೂ ಪರೀಕ್ಷೆ ಕಡ್ಡಾಯ; </strong>‘ರಜೆ ಮೇಲೆ ಊರಿಗೆ ಹೋಗಿ ಬರುವ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನೆಗಟಿವ್ ವರದಿ ಬಂದರಷ್ಟೇ ಕೆಲಸಕ್ಕೆ ಸೇರಿಸಿಕೊಳ್ಳಲಾಗುತ್ತಿದೆ’ ಎಂದೂ ಶೇಷಮೂರ್ತಿ ಹೇಳಿದರು.</p>.<p>‘ಬಂದಿಗಳಲ್ಲಿ ಜ್ವರ, ಕೆಮ್ಮು ಮತ್ತು ನೆಗಡಿ ಲಕ್ಷಣಗಳು ಇದ್ದರೂ ಕೊರೊನಾ ವೈರಾಣು ಪರೀಕ್ಷೆ ಮಾಡಿಸಲಾಗುತ್ತಿದೆ. ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ’ ಎಂದರು.</p>.<p><strong>500ಕ್ಕೂ ಹೆಚ್ಚು ಬಂದಿಗಳಿಗೆ ಪೆರೋಲ್</strong><br />ಕೇರಳದಲ್ಲಿ ಮೊದಲ ಕೊರೊನಾ ಪ್ರಕರಣ ಕಾಣಿಸಿಕೊಂಡಾಗಿನಿಂದಲೇ ಕಾರಾಗೃಹದಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. 500ಕ್ಕೂ ಹೆಚ್ಚು ಬಂದಿಗಳನ್ನು ಮೂರು ತಿಂಗಳ ಸಾಮಾನ್ಯ ಪೆರೋಲ್ ನೀಡಿ ಮನೆಗೆ ಕಳುಹಿಸಲಾಗಿದೆ.</p>.<p><strong>ಪೊಲೀಸರಿಂದಲೇ ಪರೀಕ್ಷೆ; ಮೆಚ್ಚುಗೆ</strong><br />ಅಪರಾಧ ಪ್ರಕರಣಗಳಲ್ಲಿ ಬಂಧಿಸುವ ಆರೋಪಿಗಳನ್ನು ಪೊಲೀಸರೇ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವುದಕ್ಕೆ ಕಾರಾಗೃಹದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಬೆಂಗಳೂರು ಪೊಲೀಸರೇ ಆರೋಪಿಗಳ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಬಂದವರನ್ನಷ್ಟೇ ಜೈಲಿಗೆ ಕಳುಹಿಸುತ್ತಿರುವುದು ಒಳ್ಳೆಯ ನಡೆ. ಮುಂಜಾಗ್ರತಾ ಕ್ರಮವಾಗಿ ಇಂಥ ಆರೋಪಿಗಳನ್ನೂ 21 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ’ ಎಂದು ಶೇಷಮೂರ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>