<p><strong>ಬೆಂಗಳೂರು:</strong> ಪಾದರಾಯನಪುರದ ಗುಡ್ಡದಹಳ್ಳಿಯಲ್ಲಿ ಭಾನುವಾರ ರಾತ್ರಿ ಬಿಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಮಹಿಳಾ ರೌಡಿ ಸೇರಿ 54 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕೋವಿಡ್-19 ಸೋಂಕಿತರ ಜೊತೆ ದ್ವಿತೀಯ ಸಂಪರ್ಕದಲ್ಲಿದ್ದ ಸೋಂಕು ಶಂಕಿತರನ್ನು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದರು.</p>.<p>ಕ್ವಾರಂಟೈನ್ಗೆ ಒಪ್ಪದ ಶಂಕಿತರು ಹಾಗೂ ಅವರ ಕಡೆಯವರು, ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದರು. ರಸ್ತೆಗೆ ಅಡ್ಡವಾಗಿ ಹಾಕಿದ್ದ ತಗಡು, ಬ್ಯಾರಿಕೇಡ್ ಕಿತ್ತು ಹಾಕಿದ್ದರು. ಸ್ಥಳದಲ್ಲಿದ್ದ ಪೆಂಡಾಲ್ ಧ್ವಂಸ ಮಾಡಿದ್ದರು.</p>.<p>ರಾತ್ರಿಯೇ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಘಟನೆ ಸಂಬಂಧ ಜಗಜೀವನರಾಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>'ಘಟನೆ ಸಂಬಂಧ ರೌಡಿಶೀಟರ್ ಫಿರೋಜಾ ಎಂಬ ಮಹಿಳೆ ಸೇರಿ 54 ಮಂದಿಯನ್ನು ಬಂಧಿಸಲಾಗಿದೆ. ಫಿರೋಜಾ, ಸ್ಥಳೀಯವಾಗಿ ಗಾಂಜಾ ಮಾರುತ್ತಿದ್ದಳು. ಆಕೆಯೇ ಸಂಚು ರೂಪಿಸಿ ಗಲಾಟೆ ಮಾಡಿಸಿದ್ದಾಳೆ. ಬಂಧಿತ ಆರೋಪಿಗಳ ಮೇಲೆ ಈ ಹಿಂದೆಯೇ ಹಲವು ಪ್ರಕರಣಗಳು ದಾಖಲಾಗಿವೆ. ಅವರೆಲ್ಲ ಅಪರಾಧ ಹಿನ್ನೆಲೆಯುಳ್ಳವರು. ಗಲಾಟೆ ವೇಳೆ ಬಹುತೇಕರು ಗಾಂಜಾ ಸೇವಿಸಿದ್ದರು ಎಂಬ ಅನುಮಾನವಿದೆ' ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದ್ರ ಮುಖರ್ಜಿ ಹೇಳಿದ್ದಾರೆ.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸೋಮವಾರ ಪಾದರಾಯನಪುರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಾದರಾಯನಪುರದ ಗುಡ್ಡದಹಳ್ಳಿಯಲ್ಲಿ ಭಾನುವಾರ ರಾತ್ರಿ ಬಿಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಮಹಿಳಾ ರೌಡಿ ಸೇರಿ 54 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕೋವಿಡ್-19 ಸೋಂಕಿತರ ಜೊತೆ ದ್ವಿತೀಯ ಸಂಪರ್ಕದಲ್ಲಿದ್ದ ಸೋಂಕು ಶಂಕಿತರನ್ನು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದರು.</p>.<p>ಕ್ವಾರಂಟೈನ್ಗೆ ಒಪ್ಪದ ಶಂಕಿತರು ಹಾಗೂ ಅವರ ಕಡೆಯವರು, ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದರು. ರಸ್ತೆಗೆ ಅಡ್ಡವಾಗಿ ಹಾಕಿದ್ದ ತಗಡು, ಬ್ಯಾರಿಕೇಡ್ ಕಿತ್ತು ಹಾಕಿದ್ದರು. ಸ್ಥಳದಲ್ಲಿದ್ದ ಪೆಂಡಾಲ್ ಧ್ವಂಸ ಮಾಡಿದ್ದರು.</p>.<p>ರಾತ್ರಿಯೇ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಘಟನೆ ಸಂಬಂಧ ಜಗಜೀವನರಾಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>'ಘಟನೆ ಸಂಬಂಧ ರೌಡಿಶೀಟರ್ ಫಿರೋಜಾ ಎಂಬ ಮಹಿಳೆ ಸೇರಿ 54 ಮಂದಿಯನ್ನು ಬಂಧಿಸಲಾಗಿದೆ. ಫಿರೋಜಾ, ಸ್ಥಳೀಯವಾಗಿ ಗಾಂಜಾ ಮಾರುತ್ತಿದ್ದಳು. ಆಕೆಯೇ ಸಂಚು ರೂಪಿಸಿ ಗಲಾಟೆ ಮಾಡಿಸಿದ್ದಾಳೆ. ಬಂಧಿತ ಆರೋಪಿಗಳ ಮೇಲೆ ಈ ಹಿಂದೆಯೇ ಹಲವು ಪ್ರಕರಣಗಳು ದಾಖಲಾಗಿವೆ. ಅವರೆಲ್ಲ ಅಪರಾಧ ಹಿನ್ನೆಲೆಯುಳ್ಳವರು. ಗಲಾಟೆ ವೇಳೆ ಬಹುತೇಕರು ಗಾಂಜಾ ಸೇವಿಸಿದ್ದರು ಎಂಬ ಅನುಮಾನವಿದೆ' ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದ್ರ ಮುಖರ್ಜಿ ಹೇಳಿದ್ದಾರೆ.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸೋಮವಾರ ಪಾದರಾಯನಪುರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>