‘ಹೆಚ್ಚಿನ ಸಂಖ್ಯೆಯಲ್ಲಿ ವಯಸ್ಕರನ್ನು ಕರ್ತವ್ಯಕ್ಕೆ ಬಳಸಿಕೊಳ್ಳಿ. ಗೃಹ ರಕ್ಷಕ ದಳದಲ್ಲೂ ಯುವಕರಿದ್ದು, ಅವರನ್ನೂ ಅಗತ್ಯವಿರುವ ಕಡೆ ಕರ್ತವ್ಯಕ್ಕೆ ನಿಯೋಜಿಸಬೇಕು. ಯಾರೇ ಸಿಬ್ಬಂದಿ ರಜೆ ಪಡೆದರೂ ಬೆಂಗಳೂರು ಬಿಟ್ಟು ಹೊರಗೆ ಹೋಗಬಾರದು. ಉತ್ತರ ಕರ್ನಾಟಕದ ಸಿಬ್ಬಂದಿ ಸಹ ಇಲ್ಲೇ ಇರಬೇಕು. ಈ ಎಲ್ಲ ಸೂಚನೆಗಳ ಪಾಲನೆ ಜವಾಬ್ದಾರಿಯನ್ನು ಇನ್ಸ್ಪೆಕ್ಟರ್ ಹಾಗೂ ಪಿಎಸ್ಐಗಳು ವಹಿಸಿಕೊಳ್ಳಬೇಕು’ ಎಂದೂ ತಿಳಿಸಿದ್ದಾರೆ.