<p><strong>ಮೈಸೂರು:</strong> ‘ಕೋವಿಡ್ ಸಂಕಷ್ಟದಲ್ಲಿ ಸಿಲುಕಿರುವ ದೇಶದ ಜನರ ಪುನಶ್ಚೇತನಕ್ಕಾಗಿ ಪ್ರಧಾನಿ ಮೋದಿ ಘೋಷಿಸಿರುವ ₹ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಅತ್ಯುತ್ತಮ ಘೋಷಣೆಯಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.</p>.<p>ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂಲಕ ಜಲಸಂಪನ್ಮೂಲ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕಲಾಗುವುದು’ ಎಂದು ಹೇಳಿದರು.</p>.<p>‘ಅಂತರ್ಜಲ ಮಟ್ಟ ಹೆಚ್ಚಿಸಲು ರೈತರು ತುಂತುರು ನೀರಾವರಿ ಮೂಲಕ ವ್ಯವಸಾಯ ಮಾಡುವುದು ಒಳ್ಳೆಯದು. ಇಲಾಖೆಯೂ ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು’ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.</p>.<p>ಇದೇ ವೇಳೆ ಪ್ರಾಥಮಿಕ ಹಂತದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಕೌಶಲ ಅಭಿವೃದ್ಧಿ ಪಡಿಸುವ ಎಜು ಕೌಶಲ ಆ್ಯಪ್ ಅನ್ನು ರಮೇಶ ಜಾರಕಿಹೊಳಿ ಬಿಡುಗಡೆ ಮಾಡಿದರು. ಸಂಸದ ಪ್ರತಾಪ ಸಿಂಹ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿ ಸಿ.ಜಿ.ಬೆಟಸೂರಮಠ, ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್ ಮತ್ತಿತರರಿದ್ದರು.</p>.<p><strong>ಪುಷ್ಪನಮನ</strong>: ಶಿವರಾಂಪೇಟೆಯ ತ್ರಿಪುರ ಭೈರವಿ ಮಠದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವರು, ಆಯೋಜನೆಗೊಂಡಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಭಾಗಿಯಾದರು. ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜಯಂತಿಗೆ ಚಾಲನೆ ನೀಡಿದರು.ಶಾಸಕ ಎಲ್.ನಾಗೇಂದ್ರ ಮತ್ತಿತರರು ಸಚಿವರ ಜತೆಯಲ್ಲಿದ್ದರು.</p>.<p><strong>ಆಶ್ರಮಕ್ಕೆ ಭೇಟಿ: </strong>ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮೀಜಿಯ ಆಶೀರ್ವಾದ ಪಡೆದರು. ಕೆಲ ಹೊತ್ತು ಚರ್ಚಿಸಿದರು.</p>.<p><strong>ಮಾಧವಕೃಪ</strong>: ಮೈಸೂರಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮಾಧವ ಕೃಪಗೆ ಭೇಟಿ ನೀಡಿ, ಸಂಘದ ಪ್ರಮುಖರೊಂದಿಗೆ ಸಮಾಲೋಚನೆಯನ್ನು ನಡೆಸಿದರು. ಬಿಜೆಪಿ ಕಚೇರಿಗೂ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೋವಿಡ್ ಸಂಕಷ್ಟದಲ್ಲಿ ಸಿಲುಕಿರುವ ದೇಶದ ಜನರ ಪುನಶ್ಚೇತನಕ್ಕಾಗಿ ಪ್ರಧಾನಿ ಮೋದಿ ಘೋಷಿಸಿರುವ ₹ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಅತ್ಯುತ್ತಮ ಘೋಷಣೆಯಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.</p>.<p>ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂಲಕ ಜಲಸಂಪನ್ಮೂಲ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕಲಾಗುವುದು’ ಎಂದು ಹೇಳಿದರು.</p>.<p>‘ಅಂತರ್ಜಲ ಮಟ್ಟ ಹೆಚ್ಚಿಸಲು ರೈತರು ತುಂತುರು ನೀರಾವರಿ ಮೂಲಕ ವ್ಯವಸಾಯ ಮಾಡುವುದು ಒಳ್ಳೆಯದು. ಇಲಾಖೆಯೂ ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು’ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.</p>.<p>ಇದೇ ವೇಳೆ ಪ್ರಾಥಮಿಕ ಹಂತದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಕೌಶಲ ಅಭಿವೃದ್ಧಿ ಪಡಿಸುವ ಎಜು ಕೌಶಲ ಆ್ಯಪ್ ಅನ್ನು ರಮೇಶ ಜಾರಕಿಹೊಳಿ ಬಿಡುಗಡೆ ಮಾಡಿದರು. ಸಂಸದ ಪ್ರತಾಪ ಸಿಂಹ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿ ಸಿ.ಜಿ.ಬೆಟಸೂರಮಠ, ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್ ಮತ್ತಿತರರಿದ್ದರು.</p>.<p><strong>ಪುಷ್ಪನಮನ</strong>: ಶಿವರಾಂಪೇಟೆಯ ತ್ರಿಪುರ ಭೈರವಿ ಮಠದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವರು, ಆಯೋಜನೆಗೊಂಡಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಭಾಗಿಯಾದರು. ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜಯಂತಿಗೆ ಚಾಲನೆ ನೀಡಿದರು.ಶಾಸಕ ಎಲ್.ನಾಗೇಂದ್ರ ಮತ್ತಿತರರು ಸಚಿವರ ಜತೆಯಲ್ಲಿದ್ದರು.</p>.<p><strong>ಆಶ್ರಮಕ್ಕೆ ಭೇಟಿ: </strong>ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮೀಜಿಯ ಆಶೀರ್ವಾದ ಪಡೆದರು. ಕೆಲ ಹೊತ್ತು ಚರ್ಚಿಸಿದರು.</p>.<p><strong>ಮಾಧವಕೃಪ</strong>: ಮೈಸೂರಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮಾಧವ ಕೃಪಗೆ ಭೇಟಿ ನೀಡಿ, ಸಂಘದ ಪ್ರಮುಖರೊಂದಿಗೆ ಸಮಾಲೋಚನೆಯನ್ನು ನಡೆಸಿದರು. ಬಿಜೆಪಿ ಕಚೇರಿಗೂ ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>