ಭದ್ರಾ ಮೇಲ್ದಂಡೆ ಯೋಜನೆಯನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಶಾಖಾ ಕಾಲುವೆಯ ಕಿ.ಮೀ 60 ರವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಚ್ಚುಕಟ್ಟು ಪ್ರದೇಶದ 48 ಕೆರೆಗಳಿಗೆ ಮತ್ತು ತರೀಕೆರೆ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ 79 ಕೆರೆಗಳಿಗೆ ನೀರು ಪೂರೈಸಲಾಗುವುದು. ಇದರಿಂದ 50,000 ಎಕರೆಯಷ್ಟು ಭೂಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಜಾರಕಿಹೊಳಿ ತಿಳಿಸಿದರು.