ಭಗವಾನ್ ಅವರು ಈಚೆಗೆ ಪ್ರಕಟಿಸಿದ ‘ರಾಮ ಮಂದಿರ ಏಕೆ ಬೇಡ?’ ಎಂಬ ತಮ್ಮ ಪುಸ್ತಕದಲ್ಲಿ ‘ರಾಮ ಮದ್ಯಪಾನ ಮಾಡುತ್ತಿದ್ದ, ಮಾಂಸ ತಿನ್ನುತ್ತಿದ್ದ’ ಎಂದು ಬರೆದಿದ್ದರು. ಈ ಬರಹವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಹಾಗೂ ಅವಹೇಳನ ಮಾಡಿದೆ ಎಂದು ಹಿಂದೂ ಜಾಗರಣಾ ವೇದಿಕೆ ಜಗದೀಶ್ ಹೆಬ್ಬಾಳ್ ದೂರು ನೀಡಿದ್ದಾರೆ.