ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಭಕ್ತನ ಅಂಗಡಿ ಬಂದ್‌ ಮಾಡಿಸಲು ಬಂದ ಕಮ್ಯುನಿಸ್ಟ್‌? ಏನಾಯ್ತು ಮುಂದೆ

Last Updated 8 ಜನವರಿ 2019, 14:14 IST
ಅಕ್ಷರ ಗಾತ್ರ

ಉಡುಪಿ: ಕುಂದಾಪುರ ತಾಲ್ಲೂಕಿನ ಗುಜ್ಜಾಡಿಯಲ್ಲಿ ಮಂಗಳವಾರ ಬಂದ್‌ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಮುಚ್ಚಿಸಲು ಬಂದ ಪ್ರತಿಭಟನಾಕರರನ್ನು ಅಂಗಡಿ ಮಾಲೀಕರೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.

‘ಸಾವಿರಾರು ವರ್ಷಗಳ ಇತಿಹಾಸ ಇರುವ ಶಬರಿಮಲೆಗೆ ಮುಖ್ಯಮಂತ್ರಿಯೊಬ್ಬರು ಗಲೀಜು ತಿಂದು ಹೋದಾಗ ಕಮ್ಯುನಿಸ್ಟರು ಪ್ರತಿಭಟನೆ ಮಾಡುವುದಿಲ್ಲ. ಒಳ್ಳೆಯ ಪ್ರಧಾನಿ ವಿರುದ್ಧ ಪ್ರತಿಭಟನೆ ಮಾಡುತ್ತೀರಾ’ ಎಂದು ಪ್ರಶ್ನಿಸಿದ್ದಾರೆ.

‘ಮೊದಲು ದೇಶದ ಬಗ್ಗೆ ಚಿಂತನೆ ಮಾಡಿ, ನರೇಂದ್ರ ಮೋದಿ ಸರ್ಕಾರ ಎಷ್ಟೊಂದು ಸವಲತ್ತುಗಳನ್ನು ಕೊಟ್ಟಿದೆ. ದೇಶಕ್ಕೆ ಮೋದಿ ಅವರಂಥ ಪ್ರಧಾನಿ ಸಿಗುವುದು ಪುಣ್ಯ. ನಾನು ಮೋದಿ ಭಕ್ತ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಕಮ್ಯುನಿಸ್ಟರಿಗೆ ಬೆಂಬಲ ನೀಡುವುದಿಲ್ಲ ಎಂದು ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT