ಗುರುವಾರ ರಾತ್ರಿ 11.30ರ ಸುಮಾರಿಗೆ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ಘಟನೆ ನಡೆದಿದೆ. ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಘಟಕದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ನೇತೃತ್ವದ ಗುಂಪು ತಮ್ಮ ಕೊಲೆಗೆ ಯತ್ನಿಸಿದೆ ಎಂದು ಸಂಜೀವ ಪೂಜಾರಿ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದೆ. ಸಂಜೀವ ಪೂಜಾರಿ, ಅವರ ಪತ್ನಿ ಮತ್ತು ಕೆಲವು ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ ನಡೆದಿದೆ. ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.