<p><strong>ಮೈಸೂರು:</strong> ವೀರ್ ಸಾವರ್ಕರ್ ಅವರಿಗೆ ‘ಭಾರತ ರತ್ನ’ ನೀಡುವ ಬಿಜೆಪಿಯ ಪ್ರಸ್ತಾವ ವನ್ನು ಶನಿವಾರ ಮತ್ತೆ ಟೀಕಿ ಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಚುನಾವಣೆ ಬಂದಾಗಲೆಲ್ಲ ಈ ಪಕ್ಷವು ಅಭಿವೃದ್ಧಿ ವಿಷಯಗಳನ್ನು ಮರೆಮಾಚಿ, ಜನರ ಭಾವನೆಗಳನ್ನು ಪ್ರಚೋದಿಸುವ ಹಾಗೂ ಹಿಂದುತ್ವದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ. ಹಿಂದಿನಿಂದಲೂ ಅದನ್ನೇ ಮಾಡಿಕೊಂಡು ಬಂದಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಮೈಸೂರಿನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಎಂದು ಬೇಡಿಕೊಂಡರೂ ಕೊಡಲಿಲ್ಲ. ಆದರೆ, ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಾವರ್ಕರ್ಗೆ ಈ ಗೌರವ ನೀಡಲು ಮುಂದಾಗಿದೆ’ ಎಂದು ಕಿಡಿಕಾರಿದರು.</p>.<p>‘ಹಿಂದುತ್ವ ಪದವನ್ನು ಮೊದಲು ಬಳಸಿದ್ದೇ ಸಾವರ್ಕರ್. ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದರು. ಅವರು ಜೈಲಿಗೆ ಹೋಗಿದ್ದೂ ನಿಜ’ ಎಂದರು.</p>.<p>‘ಗಾಂಧೀಜಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯವಿಲ್ಲವೆಂದು ಅವರು ಖುಲಾಸೆ ಗೊಂಡಿರಬಹುದು. ಅಂಥವರಿಗೆ ಭಾರತ ರತ್ನ ಕೊಡಬಾರದು ಎಂದಷ್ಟೇ ಹೇಳಿದ್ದೆ. ಅದಕ್ಕಾಗಿ, ನನಗೆ ಇತಿಹಾಸವೇ ಗೊತ್ತಿಲ್ಲ ಎಂದು ಬಿಜೆಪಿಯವರು ಮಾತನಾಡುತ್ತಾರೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕಟೀಲ್ಗೆ ಕರ್ನಾಟಕವೇ ಗೊತ್ತಿಲ್ಲ. ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ಬಾಲಿಶ ಹೇಳಿಕೆ ಕೊಡುತ್ತಾರೆ. ಇಂಥವರು ಇತಿಹಾಸದ ಪಾಠ ಹೇಳಲು ಬರುತ್ತಾರೆ’ ಎಂದು ತಿರುಗೇಟು ನೀಡಿದರು.</p>.<p><strong>‘ಸಿದ್ದರಾಮಯ್ಯನೇ ದೇಶದ್ರೋಹಿ’</strong></p>.<p><strong>ತುಮಕೂರು:</strong> ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವ ವಿಚಾರವನ್ನು ವಿರೋಧಿಸುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನೇ ದೇಶದ್ರೋಹಿ ಎಂದು ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಏಕವಚನದಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶಕ್ಕಾಗಿ ಪ್ರಾಣ ಕೊಟ್ಟವರ ಬಗ್ಗೆ ಸಿದ್ದರಾಮಯ್ಯನಿಗೆ ತಿಳಿದೇ ಇಲ್ಲ. ಅಂತಹವರಿಗೆ ಗೌರವ ಕೊಡುವುದೂ ಆತನಿಗೆ ಗೊತ್ತಿಲ್ಲ. ಜಾತಿಗಳನ್ನು ವಿಭಜಿಸುವುದೇ ಸಿದ್ದರಾಮಯ್ಯನ ಕೆಲಸ. ಆತ ಒಬ್ಬ ಉಗ್ರಗಾಮಿ’ ಎಂದು ಕಟುವಾಗಿ ಟೀಕಿಸಿದರು.</p>.<p>***</p>.<p>ಬ್ರಿಟಿಷರ ಕ್ಷಮೆ ಕೇಳಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಶರಣಾಗುವುದಾಗಿ ಬರೆದುಕೊಟ್ಟಿದ್ದ ಸಾವರ್ಕರ್ ಅಂಥವರಿಗೆ ‘ಭಾರತ ರತ್ನ’ ಕೊಡಬೇಕಾ?<br /><strong>–ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವೀರ್ ಸಾವರ್ಕರ್ ಅವರಿಗೆ ‘ಭಾರತ ರತ್ನ’ ನೀಡುವ ಬಿಜೆಪಿಯ ಪ್ರಸ್ತಾವ ವನ್ನು ಶನಿವಾರ ಮತ್ತೆ ಟೀಕಿ ಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಚುನಾವಣೆ ಬಂದಾಗಲೆಲ್ಲ ಈ ಪಕ್ಷವು ಅಭಿವೃದ್ಧಿ ವಿಷಯಗಳನ್ನು ಮರೆಮಾಚಿ, ಜನರ ಭಾವನೆಗಳನ್ನು ಪ್ರಚೋದಿಸುವ ಹಾಗೂ ಹಿಂದುತ್ವದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ. ಹಿಂದಿನಿಂದಲೂ ಅದನ್ನೇ ಮಾಡಿಕೊಂಡು ಬಂದಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಮೈಸೂರಿನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಎಂದು ಬೇಡಿಕೊಂಡರೂ ಕೊಡಲಿಲ್ಲ. ಆದರೆ, ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಾವರ್ಕರ್ಗೆ ಈ ಗೌರವ ನೀಡಲು ಮುಂದಾಗಿದೆ’ ಎಂದು ಕಿಡಿಕಾರಿದರು.</p>.<p>‘ಹಿಂದುತ್ವ ಪದವನ್ನು ಮೊದಲು ಬಳಸಿದ್ದೇ ಸಾವರ್ಕರ್. ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದರು. ಅವರು ಜೈಲಿಗೆ ಹೋಗಿದ್ದೂ ನಿಜ’ ಎಂದರು.</p>.<p>‘ಗಾಂಧೀಜಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯವಿಲ್ಲವೆಂದು ಅವರು ಖುಲಾಸೆ ಗೊಂಡಿರಬಹುದು. ಅಂಥವರಿಗೆ ಭಾರತ ರತ್ನ ಕೊಡಬಾರದು ಎಂದಷ್ಟೇ ಹೇಳಿದ್ದೆ. ಅದಕ್ಕಾಗಿ, ನನಗೆ ಇತಿಹಾಸವೇ ಗೊತ್ತಿಲ್ಲ ಎಂದು ಬಿಜೆಪಿಯವರು ಮಾತನಾಡುತ್ತಾರೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕಟೀಲ್ಗೆ ಕರ್ನಾಟಕವೇ ಗೊತ್ತಿಲ್ಲ. ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ಬಾಲಿಶ ಹೇಳಿಕೆ ಕೊಡುತ್ತಾರೆ. ಇಂಥವರು ಇತಿಹಾಸದ ಪಾಠ ಹೇಳಲು ಬರುತ್ತಾರೆ’ ಎಂದು ತಿರುಗೇಟು ನೀಡಿದರು.</p>.<p><strong>‘ಸಿದ್ದರಾಮಯ್ಯನೇ ದೇಶದ್ರೋಹಿ’</strong></p>.<p><strong>ತುಮಕೂರು:</strong> ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವ ವಿಚಾರವನ್ನು ವಿರೋಧಿಸುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನೇ ದೇಶದ್ರೋಹಿ ಎಂದು ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಏಕವಚನದಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶಕ್ಕಾಗಿ ಪ್ರಾಣ ಕೊಟ್ಟವರ ಬಗ್ಗೆ ಸಿದ್ದರಾಮಯ್ಯನಿಗೆ ತಿಳಿದೇ ಇಲ್ಲ. ಅಂತಹವರಿಗೆ ಗೌರವ ಕೊಡುವುದೂ ಆತನಿಗೆ ಗೊತ್ತಿಲ್ಲ. ಜಾತಿಗಳನ್ನು ವಿಭಜಿಸುವುದೇ ಸಿದ್ದರಾಮಯ್ಯನ ಕೆಲಸ. ಆತ ಒಬ್ಬ ಉಗ್ರಗಾಮಿ’ ಎಂದು ಕಟುವಾಗಿ ಟೀಕಿಸಿದರು.</p>.<p>***</p>.<p>ಬ್ರಿಟಿಷರ ಕ್ಷಮೆ ಕೇಳಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಶರಣಾಗುವುದಾಗಿ ಬರೆದುಕೊಟ್ಟಿದ್ದ ಸಾವರ್ಕರ್ ಅಂಥವರಿಗೆ ‘ಭಾರತ ರತ್ನ’ ಕೊಡಬೇಕಾ?<br /><strong>–ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>