ಕಾರವಾರ: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಇನ್ಸ್ಪೈರ್ಡ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಟ್ಕಳದಮಧು ಮಂಜುನಾಥ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.
ಭಟ್ಕಳ ತಾಲ್ಲೂಕಿನ ತೆಂಗಿನಗುಂಡಿಯ ಸರ್ಕಾರಿಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿರುವ ಈತ, ನೀರಿನ ಮೂಲಗಳಿಂದ ತ್ಯಾಜ್ಯಗಳನ್ನು ಸಂಗ್ರಹಿಸುವ ಇಂಧನ ರಹಿತ ಸೈಕಲ್ವೊಂದನ್ನು ತಯಾರಿಸಿದ್ದ. ಇದು ಸ್ವಚ್ಛ ಭಾರತ ಆಂದೋಲನಕ್ಕೆ ಪೂರಕವಾದ ಮಾದರಿಯಾಗಿದೆ.