ಹಗರಿಬೊಮ್ಮನಹಳ್ಳಿ: ‘ತಾಲ್ಲೂಕಿನ ಮಾಲವಿ ಜಲಾಶಯದ ಕಾಮಗಾರಿ ವಿಳಂಬಕ್ಕೆ ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ನೇರ ಕಾರಣ’ ಎಂದುತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್.ಬಿ.ಪಿ. ಭೀಮಾ ನಾಯ್ಕ ಗಂಭೀರ ಆರೋಪ ಮಾಡಿದರು.
ಇಲ್ಲಿನ ತಹಶಿಲ್ದಾರರ ಕಚೇರಿ ಎದುರು ಮಂಗಳವಾರ ರೈತರು ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಚಿವರು ಗುತ್ತಿಗೆದಾರರಿಂದ ಕಮಿಷನ್ ಕೇಳುತ್ತಿದ್ದಾರೆ. ವಿನಾಕಾರಣ ಕಾಮಗಾರಿಗೆ ವಿರೋಧಿಸುತ್ತಿದ್ದಾರೆ. ಜಾಕ್ವೆಲ್ ನಿರ್ಮಿಸಲು ಬಿಡುತ್ತಿಲ್ಲ‘ ಎಂದು ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದರು.