‘24 ಮುಖ್ಯ ಎಂಜಿನಿಯರ್ಗಳಿಗೆ ಪದೋನ್ನತಿ ನೀಡುವ ಕಡತಕ್ಕೆ ಸಹಿ ಹಾಕಿದ್ದಾರೆ. ಇದರಲ್ಲಿ ಹದಿನೇಳು ಜನಕ್ಕೆ ಮಾತ್ರ ಆದೇಶ ನೀಡಲಾಗಿದ್ದು, ಒಂದು ಸಮುದಾಯಕ್ಕೆ ಸೇರಿದ ಏಳು ಜನರ ಬಡ್ತಿ ತಡೆ ಹಿಡಿದಿದ್ದಾರೆ. ಹೀಗೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.