<p><strong>ಮೈಸೂರು: </strong>ಹಕ್ಕಿಜ್ವರ ದೃಢಪಟ್ಟ ಇಲ್ಲಿನ ಕುಂಬಾರಕೊಪ್ಪಲುವಿನ ಒಂದು ಕಿ.ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ 6,436 ಪಕ್ಷಿಗಳನ್ನು ಗುರುತಿಸಲಾಗಿದ್ದು, ಇವುಗಳ ಕೊಲ್ಲುವ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.</p>.<p>ಇವುಗಳಲ್ಲಿ ಕೋಳಿಗಳ ಜತೆಗೆ ಗೌಜುಲಕ್ಕಿ, ಗಿಳಿ, ಪಾರಿವಾಳಗಳು ಸೇರಿದಂತೆ ಇತರೆ ಸಾಕು ಪಕ್ಷಿಗಳೂ ಇವೆ. ಇವುಗಳನ್ನು ಕೊಲ್ಲಲು ಜಿಲ್ಲಾಡಳಿತವು 5 ಮಂದಿ ಸದಸ್ಯರಿರುವ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ರಚಿಸಿ, ಪ್ರತಿ ತಂಡಕ್ಕೆ ಸಾವಿರ ಪಕ್ಷಿಗಳನ್ನು ಕೊಲ್ಲುವ ಗುರಿ ನೀಡಿದೆ. ಈಗಾಗಲೇ ಕಾರ್ಯಾಚರಣೆ ಆರಂಭವಾಗಿದ್ದು, ಸಾವಿರಾರು ಪಕ್ಷಿಗಳನ್ನು ಕೊಂದು ಆಳವಾದ ಗುಂಡಿ ತೆಗೆದು ಹೂಳಲಾಗುತ್ತಿದೆ.</p>.<p>ಪೌಲ್ಟ್ರಿಗಳ ಆವರಣದಲ್ಲೇ ಅಲ್ಲಿನ ಕೋಳಿಗಳನ್ನು ಹೂತು ಸುಣ್ಣವನ್ನು ಸುರಿದು ಮುಚ್ಚಲಾಗುತ್ತಿದೆ. ಇನ್ನುಳಿದ ಪಕ್ಷಿಗಳನ್ನು ನಗರದ ಹೊರವಲಯದಲ್ಲಿ ಗುಂಡಿ ತೆಗೆದು ವಿಲೇವಾರಿ ಮಾಡಲಾಗುತ್ತಿದೆ.</p>.<p>ಕೋಳಿ ಹಾಗೂ ಕೊಕ್ಕರೆ ಸತ್ತು ಬಿದ್ದ ಸ್ಥಳದ ಸುತ್ತಲಿನ ಒಂದು ಕಿ.ಮೀ. ಪ್ರದೇಶವನ್ನು ‘ರೋಗಪೀಡಿತ’ ವಲಯ ಎಂದು, ಒಂದು ಕಿ.ಮೀ. ಪ್ರದೇಶದಿಂದ 10 ಕಿ.ಮೀ. ವರೆಗಿನ ಸುತ್ತಳತೆಯ ಪ್ರದೇಶವನ್ನು ‘ಜಾಗೃತ ವಲಯ’ ಎಂದು ಘೋಷಿಸಲಾಗಿದೆ.</p>.<p>ವಿವಿಧೆಡೆ ಸತ್ತಿದ್ದ 7 ಪಕ್ಷಿಗಳ ಮಾದರಿಗಳನ್ನು ಭೋಪಾಲ್ನ ಪ್ರಾಣಿಗಳ ರೋಗ ಪತ್ತೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮಾರ್ಚ್ 12 ರಂದು ಕಳುಹಿಸಿದ್ದ 2 ಮಾದರಿಗಳಲ್ಲಿ ಎಚ್5ಎನ್1 ರೋಗಾಣು ಇರುವುದು ಖಚಿತವಾಗಿದೆ. ಇತರ ಮಾದರಿಗಳು ನೆಗೆಟಿವ್ ಆಗಿವೆ.</p>.<p>ಇದಕ್ಕೂ ಮುನ್ನ ನಗರದಲ್ಲಿರುವ ಬಹುತೇಕ ಎಲ್ಲ ಕೋಳಿ ಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಹಕ್ಕಿಜ್ವರ ದೃಢಪಟ್ಟ ಇಲ್ಲಿನ ಕುಂಬಾರಕೊಪ್ಪಲುವಿನ ಒಂದು ಕಿ.ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ 6,436 ಪಕ್ಷಿಗಳನ್ನು ಗುರುತಿಸಲಾಗಿದ್ದು, ಇವುಗಳ ಕೊಲ್ಲುವ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.</p>.<p>ಇವುಗಳಲ್ಲಿ ಕೋಳಿಗಳ ಜತೆಗೆ ಗೌಜುಲಕ್ಕಿ, ಗಿಳಿ, ಪಾರಿವಾಳಗಳು ಸೇರಿದಂತೆ ಇತರೆ ಸಾಕು ಪಕ್ಷಿಗಳೂ ಇವೆ. ಇವುಗಳನ್ನು ಕೊಲ್ಲಲು ಜಿಲ್ಲಾಡಳಿತವು 5 ಮಂದಿ ಸದಸ್ಯರಿರುವ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ರಚಿಸಿ, ಪ್ರತಿ ತಂಡಕ್ಕೆ ಸಾವಿರ ಪಕ್ಷಿಗಳನ್ನು ಕೊಲ್ಲುವ ಗುರಿ ನೀಡಿದೆ. ಈಗಾಗಲೇ ಕಾರ್ಯಾಚರಣೆ ಆರಂಭವಾಗಿದ್ದು, ಸಾವಿರಾರು ಪಕ್ಷಿಗಳನ್ನು ಕೊಂದು ಆಳವಾದ ಗುಂಡಿ ತೆಗೆದು ಹೂಳಲಾಗುತ್ತಿದೆ.</p>.<p>ಪೌಲ್ಟ್ರಿಗಳ ಆವರಣದಲ್ಲೇ ಅಲ್ಲಿನ ಕೋಳಿಗಳನ್ನು ಹೂತು ಸುಣ್ಣವನ್ನು ಸುರಿದು ಮುಚ್ಚಲಾಗುತ್ತಿದೆ. ಇನ್ನುಳಿದ ಪಕ್ಷಿಗಳನ್ನು ನಗರದ ಹೊರವಲಯದಲ್ಲಿ ಗುಂಡಿ ತೆಗೆದು ವಿಲೇವಾರಿ ಮಾಡಲಾಗುತ್ತಿದೆ.</p>.<p>ಕೋಳಿ ಹಾಗೂ ಕೊಕ್ಕರೆ ಸತ್ತು ಬಿದ್ದ ಸ್ಥಳದ ಸುತ್ತಲಿನ ಒಂದು ಕಿ.ಮೀ. ಪ್ರದೇಶವನ್ನು ‘ರೋಗಪೀಡಿತ’ ವಲಯ ಎಂದು, ಒಂದು ಕಿ.ಮೀ. ಪ್ರದೇಶದಿಂದ 10 ಕಿ.ಮೀ. ವರೆಗಿನ ಸುತ್ತಳತೆಯ ಪ್ರದೇಶವನ್ನು ‘ಜಾಗೃತ ವಲಯ’ ಎಂದು ಘೋಷಿಸಲಾಗಿದೆ.</p>.<p>ವಿವಿಧೆಡೆ ಸತ್ತಿದ್ದ 7 ಪಕ್ಷಿಗಳ ಮಾದರಿಗಳನ್ನು ಭೋಪಾಲ್ನ ಪ್ರಾಣಿಗಳ ರೋಗ ಪತ್ತೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮಾರ್ಚ್ 12 ರಂದು ಕಳುಹಿಸಿದ್ದ 2 ಮಾದರಿಗಳಲ್ಲಿ ಎಚ್5ಎನ್1 ರೋಗಾಣು ಇರುವುದು ಖಚಿತವಾಗಿದೆ. ಇತರ ಮಾದರಿಗಳು ನೆಗೆಟಿವ್ ಆಗಿವೆ.</p>.<p>ಇದಕ್ಕೂ ಮುನ್ನ ನಗರದಲ್ಲಿರುವ ಬಹುತೇಕ ಎಲ್ಲ ಕೋಳಿ ಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>