‘ತಾವು ಅನಿವಾರ್ಯ ಕಾರಣಗಳಿಂದ ಮೇ 14ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು’ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.