ಬೆಂಗಳೂರು: ತಾವು ಊರಲ್ಲಿ ಇಲ್ಲದಿರುವುದರಿಂದ ಮೇ 15ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿನಮ್ರವಾಗಿ ಮನವಿ ಮಾಡಿದ್ದಾರೆ.
‘ತಾವು ಅನಿವಾರ್ಯ ಕಾರಣಗಳಿಂದ ಮೇ 14ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು’ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.