ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿಗೆ ಸಿಕ್ಕು ಕಾಡುಕೋಣ ಸಾವು

Last Updated 25 ಮಾರ್ಚ್ 2019, 15:11 IST
ಅಕ್ಷರ ಗಾತ್ರ

ಖಾನಾಪುರ: ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಗವ್ವೇಗಾಳಿ ಗ್ರಾಮದ ಬಳಿ ಸೋಮವಾರ ರೈಲು ಹೊಡೆತಕ್ಕೆ ಸಿಲುಕಿ ಕಾಡುಕೋಣವೊಂದು ಮೃತಪಟ್ಟಿದೆ.

ಗ್ರಾಮದ ಮೂಲಕ ಹಾದುಹೋಗುವ ಲೋಂಡಾ- ಕ್ಯಾಸಲರಾಕ್ ಮಾರ್ಗದ ರೈಲು ಹಳಿಯ ಮೇಲೆ ಪ್ರಯಾಣಿಕರು ಎಸೆದಿದ್ದ ತಿಂಡಿಯನ್ನು ಕಾಡುಕೋಣ ತಿನ್ನುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರುಂಡ ಹಾಗೂ ದೇಹ ಬೇರ್ಪಟ್ಟಿವೆ. ರುಂಡ ಮಾತ್ರ ಸ್ಥಳದಲ್ಲಿ ದೊರೆತಿದ್ದು, ದೇಹದ ಇತರ ಭಾಗ ದೂರದವರೆಗೆ ಹೋಗಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಡಿಎಫ್ಒ ಎಂ.ವಿ ಅಮರನಾಥ್, ಖಾನಾಪುರ ಎಸಿಎಫ್ ಸಿ.ಬಿ ಪಾಟೀಲ, ವಲಯ ಅರಣ್ಯ ಅಧಿಕಾರಿ ಬಸವರಾಜ ವಾಳದ ಮತ್ತು ಸಿಬ್ಬಂದಿ ಮೃತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಮೂರು ವರ್ಷದ ಅವಧಿಯಲ್ಲಿ ಈ ಮಾರ್ಗದಲ್ಲಿ 15ಕ್ಕೂ ಹೆಚ್ಚು ಕಾಡುಕೋಣಗಳು, ಒಂದು ಕಾಡಾನೆ ಸೇರಿದಂತೆ ಹಲವು ವನ್ಯಜೀವಿಗಳು ಮೃತಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT